ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಆಕಾಶ್ ಹಾಗೂ ಗಿರೀಶ್ ಎಂಬುವರನ್ನು ಬಂಧಿಸಲಾಗಿದೆ.
‘ಶಾಸಕರ ಹತ್ಯೆಗೆ ಸುಪಾರಿ ನೀಡ ಲಾಗಿದೆ’ ಎಂದು ಆರೋಪಿಸಿ ಶಾಸಕರ ಆಪ್ತ ಸಹಾಯಕ ಹರೀಶ್ ಬಾಬು ದೂರು ನೀಡಿದ್ದರು.
ಆದರೆ, ಪೊಲೀಸರು ಎನ್’ಸಿಆರ್ ಮಾಡಿಕೊಂಡಿದ್ದರು. ಆ ಕ್ರಮ ಪ್ರಶ್ನಿಸಿ ದೂರುದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಎಂಎಂ ನ್ಯಾಯಾಲಯವು ಎನ್’ಸಿಆರ್ ಪ್ರಕರಣ ವನ್ನು ಪರಿವರ್ತಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.
ವಿಲ್ಸನ್ ಗಾರ್ಡನ್ ನಾಗ ಹಾಗೂ ಅಶೋಕ್ ಮತ್ತಿತರರು ಎಂದು ಎಫ್’ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಡಿಯೊ ಆಧರಿಸಿ ಬಂಧಿಸಲಾಗಿದೆ. ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.














