ಬೆಂಗಳೂರು: ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿದ ಕಾನ್ ಸ್ಟೇಬಲ್ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿರುವುದಾಗಿ ಆರೋಪಿಸಿ ಸಂತ್ರಸ್ತೆ ನ್ಯಾಯಕ್ಕಾಗಿ ಬಸವನಗುಡಿ ಠಾಣೆಯ ಪ್ರತಿಭಟನೆ ನಡೆಸುತ್ತಿದ್ದಾಳೆ.
ಬಸವನಗುಡಿ ಠಾಣೆಯ ಪೊಲೀಸ್ ಪೇದೆ ಅನಿಲ್ ಕುಮಾರ್ ಎಂಬಾತ ವಂಚಿಸಿರುವುದಾಗಿ ಚಿತ್ರದುರ್ಗ ಜಿಲ್ಲೆಯ, ಉತ್ತರಹಳ್ಳಿಯ ನಿವಾಸಿ ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಅನಿಲ್ ಕುಮಾರ್ ಹಾಗೂ ಪ್ರತಿಭಟನೆ ನಡೆಸುತ್ತಿರುವ ಯುವತಿಯು ನಾಲ್ಕು ವರ್ಷದಿಂದ ಪ್ರೀತಿಸುತ್ತಿದ್ದರು. ಮದುವೆ ಆಗುವುದಾಗಿ ಅನಿಲ್ ಹೇಳಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಸಿರ್ಸಿ ಸರ್ಕಲ್ ಬಳಿಯ ಪೊಲೀಸ್ ಕ್ವಾಟ್ರಸ್ ಗೆ ಕರೆದೊಯ್ದ ಬಲತ್ಕಾರ ಮಾಡಿದ್ದಾನೆ. ಮದುವೆಯಾಗುವಂತೆ ಕೇಳಿದ್ದರೆ ಇದೀಗ ನಿರಾಕರಿಸುತ್ತಿದ್ದಾನೆ. ಇದೀಗ ಇನ್ನೊಬ್ಬರ ಜತೆ ಮದುವೆಗೆ ತಯಾರಿ ನಡೆಸಿದ್ದಾನೆ. ಇದನ್ನು ಪ್ರಶ್ನಿಸಲು ಹೋದರೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. 2023ರ ಆಗಸ್ಟ್ ನಲ್ಲಿ ನಾಗವೇಣಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ಅನಿಲ್ ಈ ಪ್ರಕಣದಲ್ಲಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ.
ಇದೀಗ ಏನು ಮಾಡಬೇಕೆಂದು ತೋಚದೇ ಯುವತಿಯು ಬಸವನಗುಡಿ ಠಾಣೆಯ ಮುಂದೆ ಒಂಟಿಯಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾಳೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಅನಿಲ್ ಕರ್ತವ್ಯದಲ್ಲಿ ಇದ್ದಾಗಲೇ ಯುವತಿ ಬಂದು ಠಾಣೆ ಮುಂದೆ ಕುಳಿತುಕೊಂಡಿದ್ದಾಳೆ. ನ್ಯಾಯ ಸಿಗುವವರೆಗೂ ನಾನು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ.
ಸಂತ್ರಸ್ತೆ ಬರುತ್ತಿದ್ದಂತೆ ಅನಿಲ್ ಕುಮಾರ್ ಪರಾರಿಯಾಗಿದ್ದಾನೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.