ಮನೆ ಸುದ್ದಿ ಜಾಲ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ 132ನೇ ಜನ್ಮದಿನ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ 132ನೇ ಜನ್ಮದಿನ ಆಚರಣೆ

0

ಮೈಸೂರು:  ಇಂದು ವಿಶ್ವದ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನದ ಅಂಗವಾಗಿ  ಮೈಸೂರಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ಪುರಭವನದ ಎದುರು ಇರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ಜನ್ಮದಿನವನ್ನು ಆಚರಿಸಲಾಯಿತು.

Join Our Whatsapp Group

ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ದೀಪಬೆಳಗಿಸಿ ಸಂವಿಧಾನಶಿಲ್ಪಿಯನ್ನು ಸ್ಮರಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಹಾನಗರ ಪಾಲಿಕೆಯ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿಗಳಾದ ಎಂ.ಮುತ್ತುರಾಜ್, ಎಸ್. ಜಾಹ್ನವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಮೈಸೂರು ನಗರ ಬಸ್‌ ನಿಲ್ದಾಣಕ್ಕೆ ಕೊಳಚೆ ನೀರಿನ ಸ್ವಾಗತ
ಮುಂದಿನ ಲೇಖನಬಿಜೆಪಿಗೆ ರಾಜೀನಾಮೆ ಸಲ್ಲಿಸಲು ಬೆಂಗಳೂರಿಗೆ ತೆರಳಿದ ಲಕ್ಷ್ಮಣ ಸವದಿ