ಮನೆ ರಾಜ್ಯ ವರ್ಷದಲ್ಲಿ ೧೧೭ ಠಾಣೆ ನಿರ್ಮಾಣ: ಗೃಹ ಸಚಿವ ಅರಗ ಜ್ಞಾನೇಂದ್ರ

ವರ್ಷದಲ್ಲಿ ೧೧೭ ಠಾಣೆ ನಿರ್ಮಾಣ: ಗೃಹ ಸಚಿವ ಅರಗ ಜ್ಞಾನೇಂದ್ರ

0

ಮೈಸೂರು(Mysuru): ಮುಂದಿನ ವರ್ಷದೊಳಗೆ 202 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ನಗರದ ಜ್ಯೋತಿನಗರದಲ್ಲಿರುವ ಡಿಆರ್ ಎ ಆವರಣಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಡಿಎಆರ್ ಘಟಕದ ಆಡಳಿತ ಕಛೇರಿ ಹಾಗೂ ಶಸ್ತ್ರಗಾರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಪೊಲೀಸರಿಗೆ 2025ರ ವೇಳೆಗೆ ಸುಮಾರು 11 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ಪೊಲೀಸರ ಕರ್ತವ್ಯಕ್ಕೆ ಕಛೇರಿ ಹಾಗೂ ನೆಮ್ಮದಿಯಿಂದ ಬದುಕಲು ಮನೆಗಳನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು.
ಪೊಲೀಸರ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಿ ಹಾಗೂ ಬೆರಳಚ್ಚು ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಿಸಿ, ಅಪರಾಧಿಗಳನ್ನು ತಕ್ಷಣ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಈ ಮೂಲಕ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುವುದು ಎಂದರು.
ಸಮಾಜದಲ್ಲಿ ಶಾಂತಿ ಕದಡಿ ಸ್ವಾಸ್ಥ್ಯ ಹಾಗೂ  ಆಸ್ತಿ ಹಾನಿ ಮಾಡುವ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಬಾರದು ಅವರು ನಿಜವಾಗಿಯೂ ಶಿಕ್ಷೆಗೆ ಗುರಿಯಾಗಿಸಬೇಕು. ಇದಕ್ಕಾಗಿ ವ್ಯವಸ್ಥಿತವಾಗಿ ಪೊಲೀಸರ ಶಕ್ತಿ ಬಲಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.
ಈವರೆಗೂ 42 ಪಿಎಫ್ಐ ಕಚೇರಿಗಳನ್ನು ವಶಕ್ಕೆ ಪಡೆದು ಅಲ್ಲಿ ದೊರೆತ ಉಪಕರಣಗಳನ್ನು ತನಿಖೆಗೊಳಪಡಿಸುವ ಕೆಲಸ ನಡೆಯುತ್ತಿದೆ. ದಸರಾ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಶಸ್ತ್ರಾಸ್ತ್ರ ಕಟ್ಟಡ ಉದ್ಘಾಟನೆ: 1 ಕೋಟಿ‌ 95ಲಕ್ಷ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಿರ್ಮಿಸಿರುವ
ಮೈಸೂರು ಜಿಲ್ಲಾ ಸಶಸ್ತ್ರ ಪಡೆಯ ಆಡಳಿತ ಕಚೇರಿ ಮತ್ತು ಆರ್ಮರಿ ಕಟ್ಟಡದಲ್ಲಿ ಡಿಎಸ್ ಪಿ ಕೊಠಡಿ, ಆರ್ ಎಸ್ ಐ ಒ ಕೊಠಡಿ, ಕಂಪ್ಯೂಟರ್ ಮತ್ತು ವೈರ್ ಲೆಸ್ ಸೆಕ್ಷನ್, ಸ್ಟೋರ್ ರೂಂ, ಡ್ಯೂಟಿ ಆಫೀಸರ್ ರೂಂ ಒಳಗೊಂಡಿದೆ ಎಂದರು.
ಈ ವೇಳೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಹಾಗೂ ಇತರರು ಇದ್ದರು.

ಹಿಂದಿನ ಲೇಖನಬೂಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್‌ಗೆ ಅವಕಾಶ: ಬಿಸಿಸಿಐ
ಮುಂದಿನ ಲೇಖನಒಳ್ಳೆಯ ಸಂದೇಶ ನೀಡಲು ಕಾಂಗ್ರೆಸ್ ಪಾದಯಾತ್ರೆ: ಶಾಸಕ ಜಿ.ಟಿ.ದೇವೇಗೌಡ