ಮೈಸೂರು: ನಗರದ ನರಸಿಂಹ ರಾಜ ಕ್ಷೇತ್ರದ ವಾರ್ಡ್ ಸಂಖ್ಯೆ 14ರ ಉದಯಗಿರಿ ಪಿಎನ್ ಟಿ ಕ್ವಾಟ್ರಸ್ ಹಾಗೂ ದಲಿತ ಸಮುದಾಯದ ರುದ್ರಭೂಮಿಗೆ ಹೋಗುವ ಸಾರ್ವಜನಿಕರ ರಸ್ತೆಯನ್ನು ಬಂದ್ ಮಾಡಿ ಅನಧಿಕೃತವಾಗಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ರುದ್ರಭೂಮಿಗೆ ಹೋಗುವ ರಸ್ತೆಯನ್ನು ಬಂದ್ ಮಾಡಿ, ಸುಮಾರು 70 ಮಳಿಗೆಗಳನ್ನು ನಿರ್ಮಿಸಲಾಗಿದೆ.
![](https://savaltv.com/wp-content/uploads/2023/08/WhatsApp-Image-2023-08-01-at-9.11.15-PM-1024x768.jpeg)
ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ಸಾರ್ವಜನಿಕ ರಸ್ತೆ ಹಾಗೂ ಫುಟ್ ಪಾತ್ ಗಳಲ್ಲಿ ಯಾವುದೇ ಕಟ್ಟಡಗಳನ್ನು ಹಾಗೂ ಯಾವುದೇ ಚಟುವಟಿಕೆಗಳನ್ನು ಮಾಡಬಾರದೆಂದು ಆದೇಶವಿದ್ದರೂ ಸಾರ್ವಜನಿಕರ ರಸ್ತೆಯಲ್ಲಿ ಮಳಿಗೆಗಳನ್ನು ನಿರ್ಮಿಸಿರುತ್ತಾರೆ.
ಸರ್ಕಾರದ 2017ರ ಕರ್ನಾಟಕ ರಾಜ್ಯ ಸಂರಕ್ಷಣಾ ಪ್ರಾಧಿಕಾರ ಅಧೀನ 2017 ಸಂಖ್ಯೆ 45ರ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಖುದ್ದು ಪರಿಶೀಲಿಸಿ, ಸಾರ್ವಜನಿಕರ ರಸ್ತೆಯ ಮೇಲಿರುವ ಕಟ್ಟಡಗಳನ್ನು ತೆರವುಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಅನಧಿಕೃತ ಕಟ್ಟಡ ನಿರ್ಮಿಸಿರುವ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮಹಾಪೌರರಾದ ಎಸ್.ಸತೀಶ್(ಸಂದೇಶ್ ಸ್ವಾಮಿ) ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.