ಮಂಗಳೂರು(Mangalore): ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಸೋಮವಾರ ಅಸ್ವಸ್ಥಗೊಂಡಿರುವ ಘಟನೆ ಶಕ್ತಿನಗರದ ಹಾಸ್ಟೆಲ್’ನಲ್ಲಿ ನಡೆದಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ಈ ಕುರಿತು ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು ಸೇವಿಸಿದ್ದ ಹಾಸ್ಟೆಲ್’ನ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್’ನ ನೀರಿನ ಮಾದರಿಗಳನ್ನು ಕೂಡ ಸಂಗ್ರಹಿಸಲಾಗಿತ್ತು, ಅದರ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಹಾರ ಕಲುಷಿತಗೊಳ್ಳಲು ಕಾರಣ ಏನೆಂಬುದು ಪರೀಕ್ಷೆಯ ವರದಿ ಕೈಸೇರಿದ ಬಳಿಕವಷ್ಟೇ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.
ಶಕ್ತಿನಗರದಲ್ಲಿ ಹಾಸ್ಟೆಲ್’ನಲ್ಲಿ ವಾಸವಿದ್ದ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಸಂಸ್ಥೆಯ ವಿದ್ಯಾರ್ಥಿನಿಯರು ಸೋಮವಾರ ಆಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರು. ಹಾಸ್ಟೆಲ್ನ ಬಹುತೇಕ ವಿದ್ಯಾರ್ಥಿಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಹೊಟ್ಟೆ ನೋವು ವಾಂತಿ ಭೇದಿ ಸಮಸ್ಯೆ ಕಾಣಿಸಿಕೊಳ್ಳಲು ಶುರುವಾಗಿತ್ತು. ಅವರನ್ನು ನಗರದ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು.
ಅನೇಕ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದು ಹಾಸ್ಟೆಲ್’ಗೆ ಮರಳಿದ್ದಾರೆ. ಈಗಲೂ ಕೆಲ ವಿದ್ಯಾರ್ಥಿನಿಯರು ಆಸ್ಪತ್ರೆಯಲ್ಲಿ ಇದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಸಂಜೆ ಅಥವಾ ನಾಳೆ ಬಹುತೇಕ ಎಲ್ಲ ವಿದ್ಯಾರ್ಥಿನಿಯರೂ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಡಾ.ರಾಜೇಶ್ ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.