ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಏಕರೂಪ ನಾಗರಿಕ ಸಂಹಿತೆಯ ಜಾರಿಯ ಅಗತ್ಯ ಇದ್ದು, ಎಲ್ಲಾ ಆಯಾಮಗಳನ್ನು ಅಧ್ಯಯನ ಮಾಡಿ ಈ ಬಗ್ಗೆ ನಿರ್ಧಾರಕ್ಕೆ ಬರುತ್ತೇವೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ವಿಧಾನಸೌಧದ ಎದುರಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಕೇಂದ್ರದ ಬಿಜೆಪಿಯ ಪ್ರಣಾಳಿಕೆಯಲ್ಲೂ ಪ್ರಸ್ತಾಪಿಸಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಇದರ ಜಾರಿ ಬಗ್ಗೆ ಸಮಿತಿ ರಚಿಸಲಾಗಿದೆ. ಈ ಕುರಿತು ಗಂಭೀರ ಚಿಂತನೆ ಮಾಡಿ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದರು.
ಕರ್ನಾಟಕದ ಬಸ್ಗಳಿಗೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ವಿಚಾರವಾಗಿ ಪ್ರತಿಕ್ರಿಯಿಸುತ್ತ, ನಾನು ಈಗಾಗಲೇ ಮಹಾರಾಷ್ಟ್ರ ಸರ್ಕಾರದ ಜತೆ ಮಾತಾಡಿದ್ದೇನೆ. ಇಂದು ಗೃಹ ಸಚಿವರು ಮತ್ತು ಡಿಜಿ ಐಜಿಪಿ ಅಲ್ಲಿನವರ ಜತೆ ಮಾತನಾಡುತ್ತಾರೆ. ನಮ್ಮ ಬಸ್ಗಳಿಗೆ ಯಾವುದೇ ಹಾನಿ ಮಾಡಬಾರದು ಎಂದು ತಿಳಿಸಿದ್ದೇವೆ. ಎರಡೂ ರಾಜ್ಯಗಳ ನಡುವೆ ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿದ್ದೇವೆ ಎಂದರು.
ಚಿಲುಮೆ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಮಾತನಾಡಿದ ಸಿಎಂ, ಪ್ರಕರಣದ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ. ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರುವುದು. ಹಲವಾರು ಜನರ ಬಂಧನ ಕೂಡ ಆಗಿದೆ. ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.
ಅಧಿಕಾರಿಗಳ ವಿರುದ್ಧ ತಪ್ಪು ಸಾಬೀತಾದರೆ ಕ್ರಮ ತೆಗೆದುಕ್ಕೊಳ್ಳುತ್ತೇವೆ. ಚುನಾವಣಾ ಆಯೋಗ ರದ್ದಾದ ವೋಟರ್ ಕಾರ್ಡ್ಗಳ ಪರಿಷ್ಕರಣೆ ಮಾಡುತ್ತಿದೆ. ಅನ್ಯಾಯವಾಗಿ ರದ್ದಾಗಿದ್ದರೆ, ಸರಿಪಡಿಸಲಾಗುತ್ತದೆ. ಎರಡು ಕಡೆ ವೋಟರ್ ಕಾರ್ಡ್ ಇದ್ದರೆ ರದ್ದು ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.