ರಾಮನಗರ: ನ್ಯಾಯಾಂಗ ನಿಂಧನೆ ಆರೋಪದಡಿ ವಕೀಲ, ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.
ಜ್ಞಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂಧಿಸಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ವಕೀಲ, SDPI ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ್ದಾರೆ.
ಫೆ. 3 ರಂದು ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಂಗ ನಿಂಧನೆ ಫೋಸ್ಟ್ ಹಾಕಿದ ವಕೀಲನ ವಿರುದ್ಧ ರಾಮನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ವಕೀಲನನ್ನು ಇಂದು ಮುಂಜಾನೆ ರಾಮನಗರ ಮನೆಯಲ್ಲಿ ಬಂಧಿಸಿದ್ದಾರೆ.
Saval TV on YouTube