ಮನೆ ಸುದ್ದಿ ಜಾಲ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

0

ಮೈಸೂರು: ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ  ವಿವಿಧ ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿ ಮಾತನಾಡಿದರು.

ಬ್ಯಾಂಕ್ ಖಾತೆಗಳಲ್ಲಿ ಅನುಮಾನಾಸ್ಪದವಾಗಿ ಹೆಚ್ಚು ಮೊತ್ತದ ಹಣದ ವರ್ಗಾವಣೆ,  ಒಂದೇ ಖಾತೆಯಿಂದ ಹೆಚ್ಚು ಖಾತೆಗಳಿಗೆ ಹಣ ವರ್ಗಾವಣೆ, ಖಾತೆಯಿಂದ ದೊಡ್ಡ ಮೊತ್ತದ ನಗದು ಹಣವನ್ನು ತೆಗೆಯುವುದು ಕಂಡುಬಂದಲ್ಲಿ ನಿಗವಹಿಸಿ ಪರಿಶೀಲಿಸಿ ವರದಿ ನೀಡುವಂತೆ ಬ್ಯಾಂಕ್ ಮ್ಯಾನೇಜರ್ ಗಳ ಸಭೆ ನಡೆಸಲಾಗಿದ್ದು ಕ್ರಮವಹಿಸಲು ತಿಳಿಸಲಾಗಿದೆ.

ಚುನಾವಣಾ ವೇಳಪಟ್ಟಿ ಪ್ರಕಟವಾದ ದಿನಾಂಕದಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬರುತ್ತಿತ್ತು, ಈ ಬಾರಿ ಮಾದರಿ ನೀತಿ ಸಂಹಿತೆ ಜಾರಿಗೂ ಮುನ್ನವೇ ಸಂಭಾವ್ಯ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಹಾಗೂ ಇನ್ನಿತರೆ ಮೂಲಗಳಿಂದ ಮತದಾರರಿಗೆ ಹಣದ ಆಮಿಷ ಒಡ್ಡುವುದು, ಬೇರೆ ವಸ್ತುಗಳನ್ನು ಹಂಚಿಕೆ ಮಾಡುವುದು ಕಂಡುಬಂದಿಲ್ಲ  ದಾಳಿ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಚುನಾವಣಾ ಆಯೋಗ ನೀಡುವ ಸೂಚನೆಗಳನ್ನು ಪಾಲಿಸಬೇಕು ಈಗಿನಿಂದಲೇ ಚುನಾವಣೆಗೆ ಸಂಬಂದಂತೆ ಇರುವ ನಿಯಮಗಳು ಹಾಗೂ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಖಾಸಗಿ ಮನೆ, ಗೋಡೆ ಹಾಗೂ ರಸ್ತೆಗಳಲ್ಲಿ, ರಸ್ತೆ ಬದಿಗಳಲ್ಲಿ , ಸ್ಧಳೀಯ ಸಂಸ್ಧೆಗಳ ಕಟ್ಟಡಗಳು ಹಾಗೂ ಇತ್ಯಾದಿಗಳಲ್ಲಿ ರಾಜಕೀಯ ಪಕ್ಷದ ವಿಷಯಗಳ ಕುರಿತ ಗೋಡೆ ಬರಹ, ಪೋಸ್ಟರ್ಸ್ ಗಳು, ಬ್ಯಾನರ್, ಕಟೌಟಗಳನ್ನು ಹಾಕಲಾಗಿದ್ದು ಅದನ್ನು ಇಂದಿನಿಂದ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಪ್ಲೆಕ್ಸ್ ಅಳವಡಿಸಲು ಅಧಿಕೃತವಾಗಿ ಸ್ಧಳೀಯ ಸಂಸ್ಧೆಗಳಿಂದ ಹಾಗೂ ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು ಅನುಮತಿ ಪಡೆಯದೆ ಅನಧಿಕೃತ ಗೋಡೆ ಬರಹ ಪ್ಲೆಕ್ಸ್ ಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು.

ಮಾದರಿ ನೀತಿ ಸಂಹಿತೆ ಜಾರಿಗೂ ಮನ್ನವೇ ರಾಜಕೀಯ ಪಕ್ಷದವರು ಬೈಕ್ ರ್ಯಾಲಿ ಮಾಡುವುದಕ್ಕೆ ರಾಜಕೀಯ ಪಕ್ಷಗಳ ಸಭೆ ಸಮಾರಂಭ ಮಾಡುವುದಕ್ಕೆ ಅನುಮತಿ ಪಡೆಯಬೇಕು.

ರಾಜಕೀಯ ಸಮಾರಂಭಗಳಲ್ಲಿ ಪೆಂಡಾಲ್ ಹಾಕುವುದು ಹಾಗೂ ಧ್ವನಿ ವರ್ಧಕ ಬಳಸುವ ಮುನ್ನ ನಿಯಾಮನುಸಾರ ಅನುಮತಿ ಪಡೆಯಬೇಕು.ಅನುಮತಿ ಪಡೆಯದೆ ಇದ್ದರೆ ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಮೋಟರ್ ವೆಹಿಕಲ್ ಕಾಯ್ದೆ ಅನ್ವಯ ಕ್ರಮ ಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯಿತ್ರಿ ಹಾಗೂ ವಿವಿಧ ರಾಜಕೀಯ ಪಕ್ಷದ ಮುಖಂಡರುಗಳು ಉಪಸ್ಧಿತರಿದ್ದರು.

ಹಿಂದಿನ ಲೇಖನಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶಪಥ ಅಲ್ಲ, ಆರು ಪಥದ ರಸ್ತೆ: ಅಧಿಕಾರಿ ಹೇಳಿಕೆ
ಮುಂದಿನ ಲೇಖನಡಿಜಿಪಿ ಪ್ರವೀಣ್ ಸೂದ್ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ: ಡಿಕೆಶಿ ಆರೋಪ