ದಾವಣಗೆರೆ: ಕದ್ದ ಬೈಕ್ ಗಳಿಗೆ ನಕಲಿ ದಾಖಲೆ ಸೃಷ್ಟಿಸಲು ಬ್ರೋಕರ್ ಗೆ ಸಹಕರಿಸಿದ ಆರೋಪದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್ ಟಿಒ) ನಾಲ್ವರು ಸಿಬ್ಬಂದಿಯನ್ನು ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಆರ್ ಟಿಒ ಕಚೇರಿಯ ದ್ವಿತೀಯ ದರ್ಜೆ ಸಹಾಯಕರಾದ (ಎಸ್ ಡಿಎ) ಜಗದೀಶ್, ಪ್ರದೀಪ್, ವಸಂತಕುಮಾರ್, ಶಶಿಕುಮಾರ್ ಬಂಧಿತರು.
ಹೊನ್ನಾಳಿ ಠಾಣೆ ಪೊಲೀಸರು ಬೈಕ್ ಕಳವು ಪ್ರಕರಣದ ತನಿಖೆ ನಡೆಸುತ್ತಿದ್ದಾಗ ನಕಲಿ ದಾಖಲೆ ಸೃಷ್ಟಿಸಿರುವ ವಿಷಯ ಬೆಳಕಿಗೆ ಬಂದಿದೆ. ನಿಜವಾದ ಮಾಲೀಕರ ಗಮನಕ್ಕೆ ತಾರದೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೈಕ್ ಗಳನ್ನು ಮತ್ತೊಬ್ಬರ ಹೆಸರಿಗೆ ವರ್ಗಾಯಿಸಿರುವುದು ಗೊತ್ತಾಗಿದೆ. ಈ ಬಗ್ಗೆ ಬಸವನಗರ ಠಾಣೆಯಲ್ಲಿ 10 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸೈಬರ್ ಠಾಣೆ ಪೊಲೀಸರು ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಿದಾಗ ಬೈಕ್ ಗಳ ಮಾಲೀಕರ ಬದಲು ಬ್ರೋಕರ್ ರಸೂಲ್ ಎಂಬುವರು ಸಹಿ ಮಾಡಿರುವುದು ಗೊತ್ತಾಗಿದೆ. ಆರೋಪಿ ರಸೂಲ್ ಹಾಗೂ ಆತನಿಗೆ ಸಹಕರಿಸಿದ ನಾಲ್ವರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.