ನವದೆಹಲಿ: ಕೋವಿಡ್ 19 ಮತ್ತು ಇನ್’ಪ್ಲೂಯೆಂಜಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಏಪ್ರಿಲ್ 10 ಮತ್ತು 11ರಂದು ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಸಿದ್ಧತಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.
ಎಲ್ಲಾ ಜಿಲ್ಲೆಗಳ ಖಾಸಗಿ ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.
ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ, ಆಮ್ಲಜನಕ ಮತ್ತು ಔಷಧಿಗಳ ದಾಸ್ತಾನು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸುವುದು ಈ ಅಭಿಯಾನದ ಉದ್ದೇಶ ಎಂದೂ ಹೇಳಿದೆ.
ಮಾರ್ಚ್ 27ರಂದು ವರ್ಚುವಲ್ ಸಭೆಯ ಮೂಲಕ ಅಭಿಯಾನದ ಮಾಹಿತಿಯನ್ನು ರಾಜ್ಯಗಳಿಗೆ ನೀಡಲಾಗುವುದು ಎಂದೂ ತಿಳಿಸಿದೆ.
ಬೂಸ್ಟರ್ ಡೋಸ್ ಪಡೆದುಕೊಳ್ಳಿ:
ದೆಹಲಿಯಲ್ಲಿ ಈಚೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಎಕ್ಸ್’ಬಿಬಿ.1.16 ತಳಿ ಕಾರಣ ಎಂದಿರುವ ತಜ್ಞರು, ಜನರು ಭಯಪಡುವ ಅಗತ್ಯವಿಲ್ಲ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಇದುವರೆಗೆ ಪಡೆದುಕೊಳ್ಳದವರು ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.