ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ನಗರದ 17ನೇ ವಾರ್ಡ್’ನ ಕಾರ್ಪೊರೇಟರ್ ರೇಷ್ಮಾಬಾನು ಅವರಿಗೆ ರಸ್ತೆ ಬದಿ ವ್ಯಾಪಾರ ಮಾಡುವ ಹಿಂದೂ ವ್ಯಾಪಾರಿಗಳು 10 ಸಾವಿರ ರೂ. ನೀಡದ್ದಕ್ಕೆ ವ್ಯಾಪಾರ ನಡೆಸುವ ಸ್ಥಳದಲ್ಲಿ ಮಣ್ಣು, ಕಸ ಹಾಕಿಸಿ ಕಿರುಕುಳ ನೀಡುತ್ತಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎ.ಎಚ್.ಪಿ.ರಾಷ್ಟ್ರೀಯ ಭಜರಂಗ ದಳ ಒತ್ತಾಯಿಸಿದೆ.
ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿರುವ ಎ.ಎಚ್.ಪಿ.ರಾಷ್ಟ್ರೀಯ ಭಜರಂಗ ದಳದ ಜಿಲ್ಲಾಧ್ಯಕ್ಷ ಲೋಕೇಶ್ ಕೆ, ರೇಷ್ಮಾಬಾನು ಅವರಿಂದಾಗುತ್ತಿರುವ ತೊಂದರೆ ಬಗ್ಗೆ ತಿಳಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಹೈವೇ ವೃತ್ತದ ಬಳಿ ಪುತ್ಥಳಿ ಪಾರ್ಕ್ ಮುಂಭಾಗ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುವ ಹಿಂದೂ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು 17ನೇ ವಾರ್ಡ್’ನ ಪಾಲಿಕೆ ಸದಸ್ಯೆ ರೇಷ್ಮಾ ಬಾನು ತಿಂಗಳಿಗೆ 10 ಸಾವಿರ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಹಣ ಕೊಡದಿದ್ದಕ್ಕೆ ರಸ್ತೆಗೆ ಮಣ್ಣು ಹಾಕಿಸಿ ವ್ಯಾಪಾರಿಗಳಿಗೆ ತೊಂದರೆ ನೀಡುತ್ತಿರುವುದು ಮಾತ್ರವಲ್ಲದೇ ಸ್ವಚ್ಛ ನಗರಿ ಖ್ಯಾತಿಯ ಮೈಸೂರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಇವರು ಚುನಾಯಿತ ಪ್ರತಿನಿಧಿಯಾಗಿ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವುದರಿಂದ ರೇಷ್ಮಾ ಬಾನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೇ ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿರುವ ಪಾಲಿಕೆ ಸದಸ್ಯೆ ರೇಷ್ಮಾಬಾನು, ಅವರ ಸಂಗಡಿಗರಾದ ನಾಸೀರ್ ಮತ್ತು ಮುಬಾರಕ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇಲ್ಲವಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.