ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರವಾಗಿ ಟೆಂಡರ್ ನೀಡಿದ್ದು, ಭ್ರಷ್ಟಾಚಾರ ನಡೆಸಲಾಗಿದೆ. ಈ ಬಗ್ಗೆ ಪೂರಕ ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ದೂರು ಪತ್ರ ಬರೆಯಲಾಗಿದೆ ಎಂದು ಕೆ.ಮಹಾದೇವ ಹೇಳಿದರು.
ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಲಪತಿ, ಕುಲಸಚಿವ, ಕುಲಪತಿಗಳ ವಿಶೇಷ ಅಧಿಕಾರಿ ಹಾಗೂ ಕೆಸೆಟ್ ಕಾರ್ಯದರ್ಶಿಯು ಅಧಿಕಾರ ದುರುಪಯೋಗಪಡಿಸಿಕೊಂಡು ಟೆಂಡರ್ ಅನ್ನು ನಿಯಮಬಾಹಿರವಾಗಿ ನೀಡಿದ್ದಾರೆ ಎಂದು ಆರೋಪಿಸಿದರು.
ಪರೀಕ್ಷಾ ಕಾರ್ಯ ಚಟುವಟಿಕೆ ನಿರ್ವಹಿಸುವ ಟೆಂಡರ್ ಅನ್ನು ನಿಯಮಗಳನ್ನು ಉಲ್ಲಂಘಿಸಿ ಅಧಿಕ ಮೊತ್ತಕ್ಕೆ ನೀಡಲಾಗಿದೆ. ವಿದ್ಯಾರ್ಥಿಯ ಅಧ್ಯಯನ ಪತ್ರಿಕೆ ನಿರ್ವಹಿಸಲು ಸಿಬ್ಬಂದಿಗೆ ₹ 64 ನೀಡಲಾಗುತ್ತಿತ್ತು. ಅದನ್ನು ₹ 360ಕ್ಕೆ ಹೆಚ್ಚಿಸಲಾಗಿದೆ. 1 ಲಕ್ಷ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಸಲು ₹ 2.56 ಕೋಟಿ ಖರ್ಚಾಗುತ್ತದೆ. ಹೊಸ ಟೆಂಡರ್ನಿಂದ 2019ರಿಂದ ಇದುವರೆಗೂ ₹ 10.26 ಕೋಟಿ ಹಣ ವಿಶ್ವವಿದ್ಯಾಲಯಕ್ಕೆ ನಷ್ಟವಾಗಿದೆ ಎಂದು ಆರೋಪಿಸಿದರು.
ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ನಿಯಮ ಬಾಹಿರವಾಗಿ ಕೋವಿಡ್ ಸಂದರ್ಭದಲ್ಲಿ 590 ಬೋಧಕೇತರ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿತ್ತು. ಆ ಸಿಬ್ಬಂದಿಯನ್ನು ಬಿಡುಗಡೆ ಮಾಡಲು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೆ.9, 2021ರಂದು ನೋಟಿಸ್ ನೀಡಿದ್ದರು ಎಂದು ಉಲ್ಲೇಖಿಸಿದರು. ರಾಜ್ಯಪಾಲರಿಗಲ್ಲದೆ, ಲೋಕಾಯುಕ್ತಕ್ಕೂ ಆ.23ರಂದು ದೂರು ನೀಡಲಾಗಿದೆ. ಸಿಂಡಿಕೇಟ್ ಸಭೆಯಲ್ಲಿ ಪಾಲ್ಗೊಳ್ಳುವ ಸದಸ್ಯರ ಭತ್ಯೆಯನ್ನು ₹ 5 ಸಾವಿರದಿಂದ ₹ 7 ಸಾವಿರಕ್ಕೆ ಹಾಗೂ ಪ್ರಯಾಣ ಭತ್ಯೆಯನ್ನು ಶೇ 50ರಷ್ಟು ಹೆಚ್ಚಿಸಲಾಗಿದೆ ಎಂದು ದೂರಿದರು.
ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ತನಿಖಾ ತಂಡವು ದಾಖಲೆಗಳನ್ನು ಪರಿಶೀಲಿಸಿದೆ. ಮಾಹಿತಿ ಹಕ್ಕು ಕಾಯ್ದೆಯಿಂದ 2019–20ರ ಲೆಕ್ಕಪತ್ರದ ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ್ದು, ಅದನ್ನು ಆಧರಿಸಿ ರಾಜ್ಯಪಾಲರಿಗೆ ದೂರು ನೀಡಿದ್ದೇನೆ ಎಂದರು.
ದೂರುದಾರರು ನಮ್ಮಿಂದ ಯಾವುದೇ ದಾಖಲೆ ಪಡೆದಿಲ್ಲ: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ತಂಡವು ವಿಶ್ವವಿದ್ಯಾಲಯಕ್ಕೆ ಆ.22ರಂದು ಆಗಮಿಸಿ ಲೆಕ್ಕ ಪರಿಶೋಧನೆ ನಡೆಸಿತು. ವಿಶ್ವವಿದ್ಯಾಲಯದಿಂದ ದಾಖಲೆ, ಕಡತಗಳು, ಪೂರಕ ಮಾಹಿತಿಯನ್ನು ನೀಡಲಾಗಿದೆ. ಅಗತ್ಯ ಸಹಕಾರವನ್ನು ನೀಡಲಾಗಿದೆ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ಪ್ರತಿಕ್ರಿಯಿಸಿದರು.
ಕಾನೂನಿಗಿಂತ ಬೇರೆ ಯಾವುದೂ ದೊಡ್ಡದಿಲ್ಲ. ದೂರುದಾರರ ಆರೋಪಗಳ ಬಗ್ಗೆ ತಿಳಿದಿಲ್ಲ. ಯಾವ ದಾಖಲೆ ಆಧರಿಸಿ ಆರೋಪಿಸುತ್ತಿದ್ದಾರೋ ಗೊತ್ತಿಲ್ಲ. ನಮ್ಮಿಂದ ಯಾವುದೇ ದಾಖಲೆಯನ್ನು ದೂರುದಾರರು ಪಡೆದಿಲ್ಲ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.