ಮನೆ ರಾಜಕೀಯ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ

0

ಬೆಂಗಳೂರು/ದಾವಣಗೆರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದು,ರಾಜ್ಯದ ಜಿಲ್ಲೆಗಳಿಂದ ಸಾವಿರಾರು ಮಂದಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

ಇದೆ ಸಂದರ್ಭದಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯ ಕಾರ್ಯಕ್ರಮಗಳು ಹಾಗೂ ಜನಪ್ರಿಯ ಯೋಜನೆಗಳ ಕುರಿತು ಹೊತ್ತಗೆಯನ್ನು ಗಣ್ಯರು ಬಿಡುಗಡೆ ಮಾಡಲಿದ್ದಾರೆ.

ಸಾಲು ಸಾಲು ಚುನಾವಣೆಗಳಲ್ಲಿ ಸೋತಿರುವ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಸ್ಪಷ್ಟ ಜನಾದೇಶ ಪಡೆದು ಅಧಿಕಾರಕ್ಕೆ ಬರುವ ಬಗ್ಗೆ ದಾವಣಗೆರೆ ನಗರದಲ್ಲಿ ರಾಷ್ಟ್ರಕ್ಕೆ ಹೊಸ ಸಂದೇಶ ರವಾನಿಸುವ ಉತ್ಸಾಹದಲ್ಲಿದ್ದಾರೆ.

ಹಿಂದಿನ ಲೇಖನವಿಶಾಖಪಟ್ಟಣದ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ: 50ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ
ಮುಂದಿನ ಲೇಖನಗೂಗಲ್ ಮ್ಯಾಪ್ ಒದಗಿಸಲಿದೆ ವೇಗದ ಮಿತಿ ಮಾಹಿತಿ