ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪಿನ ಬಗ್ಗೆ ವಕೀಲರ ಪರಿಷತ್ ಸದಸ್ಯರು ಮಾತನಾಡುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಶುಕ್ರವಾರ ತೀರ ಬೇಸರ ವ್ಯಕ್ತಪಡಿಸಿದ್ದಾರೆ.
ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠದ ಶತಮಾನೋತ್ಸವದ ಅಂಗವಾಗಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ತೀರ್ಪುಗಳ ಬಗ್ಗೆ ವಕೀಲರ ಪರಿಷತ್ ಸದಸ್ಯರು ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸುವ ಬೆಳವಣಿಗೆಯ ಬಗ್ಗೆ ತೀರ ಬೇಸರವಾಗಿದೆ. ಮೊಟ್ಟ ಮೊದಲಿಗೆ ನೀವೆಲ್ಲಾ ನ್ಯಾಯಾಲಯದ ಅಧಿಕಾರಿಗಳು. ನ್ಯಾಯಾಲಯದ ಘನತೆ ಮತ್ತು ಸತ್ಯ ಎತ್ತಿ ಹಿಡಿಯುವುದು ನಿಮ್ಮ ಕೈಯಲ್ಲಿದೆ” ಎಂದಿದ್ದಾರೆ.
ಇತರರಂತೆ ವಕೀಲರಿಗೆ ತಮ್ಮದೇ ಆದ ರಾಜಕೀಯ ಸೆಳೆತ ಮತ್ತು ನಂಬಿಕೆಗಳು ಇವೆ. ತತ್ವಜ್ಞಾನಿ ಅರಿಸ್ಟಾಟಲ್ ಹೇಳಿದಂತೆ ಮನುಷ್ಯರು ಸ್ವಭಾವತಃ ರಾಜಕೀಯ ಪ್ರಾಣಗಳು. ಅದಾಗ್ಯೂ, ವಕೀಲರು ನ್ಯಾಯಾಲಯಗಳು ಮತ್ತು ಸಂವಿಧಾನವನ್ನು ಎಲ್ಲದಕ್ಕಿಂತ ಮಿಗಿಲಾಗಿ ಕಾಣಬೇಕು” ಎಂದು ಒತ್ತಿಹೇಳಿದರು.
“ಸ್ವತಂತ್ರವಾದ ವಕೀಲರ ಪರಿಷತ್ ಕಾನೂನು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಆಡಳಿತವನ್ನು ರಕ್ಷಿಸುವ ನೈತಿಕ ಭದ್ರಕೋಟೆಯಾಗಿದೆ” ಎಂದು ಹೇಳಿದರು.
ಚುನಾವಣಾ ಬಾಂಡ್ ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ ವಕೀಲರ ಪರಿಷತ್ ಅಧ್ಯಕ್ಷ ಅದೀಷ್ ಅಗರವಾಲ್ ಪತ್ರ ಬರೆದಿದ್ದ ವೇಳೆ ಅವರನ್ನು ಮುಕ್ತ ನ್ಯಾಯಾಲಯದಲ್ಲಿ ಸಿಜೆಐ ತರಾಟೆಗೆ ತೆಗೆದುಕೊಂಡಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಜೆಐ ಅವರ ಹೇಳಿಕೆಗಳು ಮಹತ್ವ ಪಡೆದಿವೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.