ಮನೆ ರಾಜ್ಯ ಶಾಲಾ ಕಟ್ಟಡದಲ್ಲಿ ಬಿರುಕು; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ..!

ಶಾಲಾ ಕಟ್ಟಡದಲ್ಲಿ ಬಿರುಕು; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ..!

0

ಚಾಮರಾಜನಗರ : ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ.

ಮಳೆ ಬಂದರೆ ಕೊಠಡಿಗಳು ಸೋರುತ್ತಿದ್ದು, ಶೌಚಾಲಯ ವ್ಯವಸ್ಥೆ ಇಲ್ಲ, ಪೀಠೋಪಕರಣಗಳಿಲ್ಲ, ಆಟವಾಡಲು ಮೈದಾನ ಇಲ್ಲ. ಅವ್ಯವಸ್ಥೆಯಿಂದ ಶಾಲಾ ಮಕ್ಕಳು ಕೂಡ ಬೇಸತ್ತು ಹೋಗಿದ್ದಾರೆ. ಈ ಶಾಲಾ ಕಟ್ಟಡ ದುರಸ್ತಿಪಡಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿದ್ಯಾರ್ಥಿಗಳು ಮೊರೆ ಹೋಗಿದ್ದಾರೆ.

ಹಲವು ಬಾರಿ ದೂರು ನೀಡಿದ್ರೂ, ಕೂಡ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.