ಕನ್ಯಾಕುಮಾರಿ(Kanyakumari): ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಹರಡಲಾಗಿದೆ. ಇದು ಅಂತರ್ಯುದ್ಧಕ್ಕೆ ಕಾರಣವಾಗಬಹುದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.
‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂಬ ಒಲವನ್ನು ಕಾಂಗ್ರೆಸ್ ಪಕ್ಷ ಹೊಂದಿದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ದೇಶದ ಮುಂದೆ ದೊಡ್ಡ ಸವಾಲುಗಳಿದ್ದು, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾದರೆ ಅವುಗಳನ್ನು ಎದುರಿಸುವುದು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ದ್ವೇಷ, ಉದ್ವಿಗ್ನತೆ, ಹಿಂಸಾಚಾರ ಎಂಬ ವಾತಾವರಣ ನಿರ್ಮಾಣವಾಗಿರುವುದರಿಂದ ‘ಭಾರತ್ ಜೋಡೋ’ ಘೋಷಣೆಯ ಅಗತ್ಯವಿದೆ ಎಂದಿದ್ದಾರೆ.
ಜನರ ನಡುವೆ ಪ್ರೀತಿ, ಸಹೋದರತೆ ಮತ್ತು ಸೌಹಾರ್ದತೆ ಇರಬೇಕಿದೆ. ಹಿಂಸಾಚಾರವನ್ನು ಸಹಿಸಲಾರೆವೆಂಬ ಸಂದೇಶವನ್ನು ನಾವು ರವಾನಿಸಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈಗ ದೇಶದಲ್ಲಿ ಧ್ರುವೀಕರಣವಾಗಿದೆ. ಇದನ್ನು ನಿಯಂತ್ರಿಸಬೇಕಿದೆ. ಇಲ್ಲದೇ ಹೋದರೆ, ದೇಶವು ಅಂತರ್ಯುದ್ಧದತ್ತ ಸಾಗಬಹುದು ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರು ಅಹಿಂಸೆಯನ್ನು ನಂಬುತ್ತಾರೆ, ಅವರ ಹೃದಯದಲ್ಲಿ ಯಾವುದೇ ದ್ವೇಷವಿಲ್ಲ ಎಂದು ತಿಳಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.