ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತೋಟಗಾರಿಕೆ ಮತ್ತು ಯೋಜನಾ ಸಚಿವ ವಿ ಮುನಿರತ್ನ ಅವರು ಹೂಡಿರುವ ಕ್ರಿಮಿನಲ್ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿದಂತೆ 19 ಮಂದಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಜಾಮೀನುರಹಿತ ವಾರೆಂಟ್ ಹೊರಡಿಸಿದೆ.
ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರ ಮೂಲಕ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ದಾವೆಯ ವಿಚಾರಣೆ ನಡೆಸಿರುವ 8ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಾದ ಕೆ ಎನ್ ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ.
ಕಮಿಷನ್ ಅಥವಾ ಪರ್ಸೆಂಟೇಜ್ಗೆ ಸಂಬಂಧಿಸಿದಂತೆ ಫಿರ್ಯಾದಿಯಾಗಿರುವ ಸಚಿವ ಮುನಿರತ್ನ ಅವರ ವಿರುದ್ಧ ಪ್ರತಿವಾದಿಗಳಾದ ಡಿ ಕೆಂಪಣ್ಣ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಉಪಾಧ್ಯಕ್ಷರಾದ ವಿ ಕೃಷ್ಣ ರೆಡ್ಡಿ, ಎಂ ಎಸ್ ಸಂಕ ಗೌಡಶನಿ, ಕೆ ಎಸ್ ಶಾಂತೇಗೌಡ, ಕೆ ರಾಧಾಕೃಷ್ಣ ನಾಯಕ್, ಆರ್ ಮಂಜುನಾಥ್, ಆರ್ ಅಂಬಿಕಾಪತಿ, ಬಿ ಸಿ ದಿನೇಶ್, ಸಿ ಡಿ ಕೃಷ್ಣ, ಕಾರ್ಯದರ್ಶಿ ಜಿ ಎಂ ರವೀಂದ್ರ, ಖಜಾಂಚಿ ಎಚ್ ಎಸ್ ನಟರಾಜ್, ಜಂಟಿ ಕಾರ್ಯದರ್ಶಿಗಳಾದ ಎಂ ರಮೇಶ್, ಎನ್ ಮಂಜುನಾಥ್, ಸಂಘಟನಾ ಕಾರ್ಯದರ್ಶಿಗಳಾದ ಜಗನ್ನಾಥ್ ಬಿ. ಶೆಗಜಿ, ಸುರೇಶ್ ಎಸ್ ಭೋಮ ರೆಡ್ಡಿ, ಕೆ ಎ ರವಿಚಂಗಪ್ಪ, ಬಿ ಎಸ್ ಗುರುಸಿದ್ದಪ್ಪ, ಕರ್ಲೆ ಇಂದ್ರೇಶ್ ಅವರು ನೀಡಿರುವ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟ, ಪ್ರಸಾರವಾಗಿದ್ದು, ಇದು ಫಿರ್ಯಾದಿಯ ವರ್ಚಸ್ಸಿಗೆ ಮೇಲ್ನೋಟಕ್ಕೆ ಧಕ್ಕೆ ಉಂಟು ಮಾಡಿದೆ ಎಂದು ಕಳೆದ ವಿಚಾರಣೆಯಲ್ಲಿ ನ್ಯಾಯಾಲಯ ಆದೇಶ ಮಾಡಿತ್ತು.
ಅಲ್ಲದೇ, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್’ಗಳಾದ 499 ಮತ್ತು 500ರ ಅಡಿ ಸಂಜ್ಞೇಯ ಪರಿಗಣಿಸಲಾಗಿತ್ತು. ಇದರ ಭಾಗವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದ್ದ ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಪ್ರತಿವಾದಿಗಳು ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ. ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಲಾಗಿದೆ.
ಇದಲ್ಲದೇ, ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಸೇರಿದಂತೆ 19 ಮಂದಿಯ ವಿರುದ್ದ ಪ್ರತ್ಯೇಕವಾಗಿ ಸಿವಿಲ್ ಮಾನಹಾನಿ ದಾವೆ ಹೂಡಿದ್ದು, ₹50 ಕೋಟಿ ಪರಿಹಾರ ಕೋರಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯವು ಪ್ರತಿವಾದಿಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಇನ್ನು ಮಾಧ್ಯಮಗಳ ವಿರುದ್ಧವೂ ಮುನಿರತ್ನ ಅವರು ಪ್ರತಿಬಂಧಕಾದೇಶ ಪಡೆದುಕೊಂಡಿದ್ದಾರೆ.