ಮನೆ ರಾಜ್ಯ ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ..!

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ..!

0

ರಾಯಚೂರು : ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ ನಡೆದಿದ್ದು, ಬಲಗೈ ತುಂಡಾಗಿದೆ. ಮೊಸಳೆ ದಾಳಿಯಿಂದ ಕೈ ಕಳೆದುಕೊಂಡ ಕುರಿಗಾಹಿ ಹೊನ್ನಗುಡೆಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೃಷ್ಣಾ ನದಿಯಲ್ಲಿ ಕುರಿ ಮರಿಗಳಿಗೆ ನೀರು ತರಲು ಹೋದಾಗ ಮೊಸಳೆ ದಾಳಿ ನಡೆದಿದೆ. ಏಕಾಏಕಿ ದಾಳಿ ಮಾಡಿ ಕೈ ಕಚ್ಚಿ ನದಿಯಲ್ಲಿ ಎಳೆದುಕೊಂಡು ಹೋಗಿದ್ದ ಮೊಸಳೆ ಹೊನ್ನಗುಡೆಪ್ಪನನ್ನ ನೀರಿನಲ್ಲಿ ಮುಳುಗಿಸಿದೆ. ನೀರಿನಲ್ಲಿ ಎಳೆದೊಯ್ದರು ಹೋರಾಡಿ ಹೊರಗೆ ಬಂದ ಹೊನ್ನಗುಂಡಪ್ಪ ಮೊಸಳೆಯಿಂದ ತಪ್ಪಿಸಿಕೊಳ್ಳಲು ಕೈ ಎಳೆದುಕೊಂಡಾಗ ಬಲಗೈ ತುಂಡಾಗಿದೆ.

ರಾಯಚೂರಿನ ಓಪೆಕ್ ಆಸ್ಪತ್ರೆಗೆ ಗಾಯಾಳು ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೃಷ್ಣಾ ನದಿ ಪಾತ್ರದಲ್ಲಿ ಮೊಸಳೆಗಳ ಸಂಖ್ಯೆ ಹೆಚ್ಚಾಗಿದ್ದು, ಸ್ಪಲ್ಪ ಮೈಮರೆತರು ಮೊಸಳೆ ದಾಳಿಗೆ ಒಳಗಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಅರಣ್ಯ ಇಲಾಖೆ ಮೊಸಳೆಗಳ ನಿಯಂತ್ರಣ ಮಾಡಬೇಕು ಹಾಗೂ ದಾಳಿಗೊಳಗಾದ ಕುರಿಗಾಹಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.