ಮನೆ ರಾಜಕೀಯ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಪ್ರಕರಣ: ವಿವಾದಾತ್ಮಕ ಹೇಳಿಕೆ ನೀಡಿದ ಸಿ.ಟಿ.ರವಿ

ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಪ್ರಕರಣ: ವಿವಾದಾತ್ಮಕ ಹೇಳಿಕೆ ನೀಡಿದ ಸಿ.ಟಿ.ರವಿ

0

ಬೆಂಗಳೂರು:  ಹಿಂದೂ ಹುಡುಗರು ಆವೇಶದಿಂದ ಘೋಷಣೆ ಕೂಗಿರಬಹುದು ಆದರೆ ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ. ಹಾಗಾಗಿ ಆಕೆ ಬಚಾವಾಗಿದ್ದಾಳೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯದ ಮುಸ್ಕಾನ್ ಖಾನ್ ಗೆ ಅಲ್‌ಖೈದಾ ಉಗ್ರ ನಾಯಕ ಹೊಗಳಿದ ವಿಡಿಯೋ ಬಹಿರಂಗವಾದ  ಬಳಿಕ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಂದೂ ಹುಡುಗರ‌ ಜಾಗದಲ್ಲಿ ಮುಸ್ಲಿಂ ಹುಡುಗರು, ಹಿಂದೂ ಹುಡುಗಿ ಇದ್ದಿದ್ದರೆ ಆಕೆ ಸುರಕ್ಷಿತವಾಗಿ ಹೋಗುತ್ತಿರಲಿಲ್ವೇನೋ? ಅಂದು ಆಕೆ ಸುರಕ್ಷಿತವಾಗಿ ಮನೆಗೆ ಬರಲು ಕಾರಣ ಅಲ್ಲಿದ್ದ ಹಿಂದೂ ಹುಡುಗರು ಎಂದು ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಹಿಜಾಬ್ ಸಮವಸ್ತ್ರಕ್ಕೆ ಮಾತ್ರ ವಿರೋಧ ಇಲ್ಲ ಅನ್ನುವುದು ಗೊತ್ತಾಗಿದೆ. ಸಮಾಜ ಒಡೆಯುವ ಸಂಚು ಇದೆ ಅನ್ನಿಸುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೀಬೇಕು. ಹಿಜಾಬ್ ವಿವಾದದ ಹಿಂದೆ ಬೇರೆಯದೇ ಸಂಚು ಇದೆ ಅನ್ನಿಸುತ್ತದೆ. ನೂರಾರು ಸಂಸ್ಕೃತಿ, ವೈವಿಧ್ಯತೆಯ ರಾಷ್ಟ್ರ ಭಾರತ ವನ್ನು ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಹಿಂದಿನ ಲೇಖನಸಸ್ಯ ವಿಜ್ಞಾನಿ ಡಾ.ಕೆ.ಗೋಪಾಲಕೃಷ್ಣ ಭಟ್ ನಿಧನ
ಮುಂದಿನ ಲೇಖನದ್ವಾದಶ ರಾಶಿಗಳ ಭವಿಷ್ಯ