ಚಿಕ್ಕಬಳ್ಳಾಪುರ : ಚರ್ಮರೋಗ ಕಾಯಿಲೆ ವಾಸಿಗೆಂದು ಫೇಸ್ ಬುಕ್ ನಲ್ಲಿ ಸಿಕ್ಕ ಲಿಂಕ್ನ್ನು ಬಳಸಿ ಅರೆಬೆತ್ತಲಾದ ಶಿಕ್ಷಕನ ವಿಡಿಯೋವನ್ನೇ ಸಂಪೂರ್ಣ ಬೆತ್ತಲೆ ವಿಡಿಯೋದಂತೆ ಸೃಷ್ಠಿಸಿ, ಆತನಿಂದ 9 ಲಕ್ಷದ 99 ಸಾವಿರ ರೂ. ಹಣವನ್ನು ಪಡೆದು ಬ್ಲಾಕ್ಮೇಲ್ ಮಾಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಜಿಲ್ಲೆಯ ಗೌರಿಬಿದನೂರು ನಗರವಾಸಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಜಗದೀಶ್ ಎನ್ನುವವರು ವಂಚನೆ ಹಾಗೂ ಬ್ಲಾಕ್ಮೇಲ್ ಗೆ ಒಳಗಾದವರು.
ಅಸಲಿಗೆ ಜಗದೀಶ್ ಗೆ ಸೋರಿಯಾಸಿಸ್ ಎನ್ನುವ ಚರ್ಮರೋಗ ಕಾಯಿಲೆ ಇದೆ. ಸೋರಿಯಾಸಿಸ್ ಕಾಯಿಲೆಗೆ ಚಿಕಿತ್ಸೆ ನೀಡುವುದಾಗಿ ಫೇಸ್ ಬುಕ್ ನಲ್ಲಿ ಲಿಂಕ್ ಒಂದು ಹರಿದಾಡುತ್ತಿತ್ತು. ಲಿಂಕ್ ನವರು ಹೇಳಿದ ಹಾಗೆ ಅರೆಬೆತ್ತಲಾಗಿ ಜಗದೀಶ ವಿಡಿಯೋ ಕಳಿಸಿದ್ದಾನೆ. ಅದೇ ವಿಡಿಯೋವನ್ನು ಬಳಸಿಕೊಂಡು ಶಿಕ್ಷಕನ ನಕಲಿ ಬೆತ್ತಲೆ ವಿಡಿಯೋ ಸೃಷ್ಠಿಸಿದ್ದಾರೆ.
ಅದನ್ನೇ ಮುಂದಿಟ್ಟುಕೊಂಡ ಸೈಬರ್ ವಂಚಕರು ಶಿಕ್ಷಕ ಜಗದೀಶ್ನಿಂದ ವಿವಿಧ ದಿನಾಂಕಗಳಲ್ಲಿ ವಿವಿಧ ಅಕೌಂಟ್ಗಳಿಗೆ ರೂ. 9,99000 ಹಣವನ್ನು ಹಾಕಿಸಿಕೊಂಡಿದ್ದಾರೆ. ಕೊನೆಗೆ ತಾನು ಮೋಸ ಹೋಗಿರುವುದನ್ನು ಅರಿತುಕೊಂಡ ಶಿಕ್ಷಕ ಜಗದೀಶ್ ನ್ಯಾಯ ಕೊಡಿಸುವಂತೆ ಚಿಕ್ಕಬಳ್ಳಾಪುರ ಸೈಬರ್ ಠಾಣೆಯ ಮೆಟ್ಟಿಲೇರಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.