ಮನೆ ರಾಜಕೀಯ ಸಾರಿಗೆ ಬಸ್​ನಲ್ಲಿ ಬಂದು ದೇವಿ ದರ್ಶನ ಪಡೆದ ಡಿ.ಕೆ.ಶಿವಕುಮಾರ್

ಸಾರಿಗೆ ಬಸ್​ನಲ್ಲಿ ಬಂದು ದೇವಿ ದರ್ಶನ ಪಡೆದ ಡಿ.ಕೆ.ಶಿವಕುಮಾರ್

0

ಮೈಸೂರು(Mysuru): ಮೂರನೇ ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆದರು.

ಚಾಮುಂಡಿ ಬೆಟ್ಟಕ್ಕೆ ತೆರಳುವ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಿ ವಿಐಪಿ ಪಾಸ್​ಗಳನ್ನು ರದ್ದು ಮಾಡಿದ್ದು, ಸಾರಿಗೆ ಬಸ್​ನಲ್ಲೇ ಚಾಮುಂಡಿ ಬೆಟ್ಟಕ್ಕೆ ತೆರಳಿದರು.

ಲಲಿತಮಹಲ್ ಹೆಲಿಪ್ಯಾಡ್ ಬಳಿ ತಾತ್ಕಾಲಿಕ ಸಾರಿಗೆ ಬಸ್ ನಿಲ್ದಾಣ ಮಾಡಲಾಗಿದ್ದು ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳು ಸಾರಿಗೆ ಬಸ್​ನಲ್ಲಿ ಹೋಗುವ ವ್ಯವಸ್ಥೆ ಮಾಡಲಾಗಿದೆ. ಈ ಬಸ್‌ನಲ್ಲೇ ಪ್ರಯಾಣಿಕರ ಜತೆ ಡಿ.ಕೆ.ಶಿವಕುಮಾರ್ ಬೆಟ್ಟಕ್ಕೆ ತೆರಳಿದರು. ಆರ್.ಧ್ರುವನಾರಾಯಣ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.

ಇಂದು ಬೆಳಗಿನ ಜಾವದಿಂದಲೇ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. ಮುಂಜಾನೆ 5:30 ರಿಂದ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಇದನ್ನೂ ಓದಿ…ಮೂರನೇ ಆಷಾಡ ಶುಕ್ರವಾರ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಇದನ್ನೂ ಓದಿ…ಆಷಾಢ ಶುಕ್ರವಾರ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಮಾಜಿ ಸಚಿವ ಹೆಚ್.ಡಿ.ರೇವಣ್ಣ

ಹಿಂದಿನ ಲೇಖನಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಫೋಟೋ, ವಿಡಿಯೋ ತೆಗೆಯುವ ಹಾಗಿಲ್ಲ
ಮುಂದಿನ ಲೇಖನಪುರುಷನೊಂದಿಗೆ ಇಚ್ಛೆಯಿಂದ ಇದ್ದ ಮಹಿಳೆ ಸಂಬಂಧ ಹಳಸಿದಾಗ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್