ಬೆಂಗಳೂರು(Bengaluru) : ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮೈಸೂರಿಗೆ ತೆರಳಲು ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ ಶಿವಕುಮಾರ್ ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಮಾತುಕತೆ ನಡೆಸಿದರು.
ಈ ಬಗ್ಗೆ ಎಸ್.ಎಂ ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೀಗಾಗಿ ಅವರ ವಿಶ್ರಾಂತಿಗೆ ಧಕ್ಕೆಯಾಗದಂತೆ ಸದ್ಯ ಯಾರೂ ಅವರ ಭೇಟಿಗೆ ಬರಬಾರದು ಎಂದು ಶಿವಕುಮಾರ್ ಅವರು ಕೃಷ್ಣ ಅವರ ಪರವಾಗಿ ಮನವಿ ಮಾಡಿದರು.
ಇನ್ನು ಆ್ಯಂಬುಲೆನ್ಸ್ 108 ತುರ್ತು ಸೇವೆ ಸ್ಥಗಿತ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ರೋಗಿಗಳ ರಕ್ಷಣೆ ಮಾಡುತಿಲ್ಲ. ರೈತರ ರಕ್ಷಣೆ ಮಾಡುತ್ತಿಲ್ಲ. ಕಾರ್ಮಿಕರ ರಕ್ಷಣೆ ಕೂಡ ಮಾಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಸರ್ಕಾರ ವಿಫಲವಾಗಿದೆ. ನಾವು ಸರ್ಕಾರವನ್ನು ತಳ್ಳುತ್ತಿದ್ಧೇವೆ ಎಂದು ಕಾನೂನು ಸಚಿವರೇ ಹೇಳಿದ್ದಾರೆ. ಸಚಿವರೇ ಹೀಗೆ ಹೇಳಿದ ಮೇಲೆ ಆ್ಯಂಬುಲೆನ್ಸ್ ಕಥೆ ಬಿಡಿ ಎಂದು ಹೇಳಿದರು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.