ಕನ್ನಡದಲ್ಲಿ ವಿಭಿನ್ನ ಶೀರ್ಷಿಕೆಯ ಚಿತ್ರಗಳ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿದೆ. ಅದಕ್ಕೀಗ ಡಾರ್ಲಿಂಗ್ ಕೃಷ್ಣ ಅವರ ‘ಕೌಸಲ್ಯಾ ಸುಪ್ರಜಾ ರಾಮ’ ಹೊಸದಾಗಿ ಸೇರ್ಪಡೆಯಾಗಿದೆ.
ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು.ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.
ಈ ಕುರಿತು ಮಾತನಾಡಿರುವ ನಿರ್ದೇಶಕ ಶಶಾಂಕ್, ‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎಂದಿದ್ದಾರೆ.
ಡಾರ್ಲಿಂಗ್ ಕೃಷ್ಣ ಅವರ ತಾಯಿ – ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯುತ್ಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿದ್ದು, ಅದರಲ್ಲಿ ಒಬ್ಬರು ಹೊಸಬರು ಎನ್ನುತ್ತಿದೆ ಚಿತ್ರತಂಡ.ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ.
ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.ಸದಭಿರುಚಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಈಗ ಈಡೇರಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.