ಮನೆ ಕಾನೂನು ದರ್ಶನ್ ಜಾಮೀನು ಅರ್ಜಿ: ವಕೀಲರ ವಾದ ಅಂತ್ಯ, ಅಕ್ಟೋಬರ್ 14ಕ್ಕೆ ಆದೇಶ

ದರ್ಶನ್ ಜಾಮೀನು ಅರ್ಜಿ: ವಕೀಲರ ವಾದ ಅಂತ್ಯ, ಅಕ್ಟೋಬರ್ 14ಕ್ಕೆ ಆದೇಶ

0

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆ ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್​ಪಿಪಿ ಪ್ರಸನ್ನ ಕುಮಾರ್ ನಡುವೆ ತುರುಸಿನ ವಾದ-ಪ್ರತಿವಾದಗಳು ನಡೆದಿವೆ.

Join Our Whatsapp Group

ಇಬ್ಬರೂ ವಕೀಲರು ಕಟುವಾದ ವಾದ ಸರಣಿಯನ್ನು ನ್ಯಾಯಾಲಯದ ಮುಂದಿರಿಸಿದ್ದಾರೆ. ಇಂದೂ ಸಹ ವಾದ ನಡೆದಿದ್ದು, ಇಬ್ಬರೂ ವಕೀಲರು ತಮ್ಮ ವಾದಗಳನ್ನು ಅಂತ್ಯಗೊಳಿಸಿದ್ದು, ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ.

ಅಕ್ಟೋಬರ್ 14 ರಂದು ಎ2 ಆರೋಪಿ ದರ್ಶನ್​ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ತಿಳಿಯಲಿದೆ. ಅದೇ ದಿನ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ8 ರವಿಶಂಕರ್, ಎ8, ಎ11, ಎ12 ಹಾಗೂ ಎ13 ಅವರ ಜಾಮೀನು ಅರ್ಜಿಯ ಆದೇಶವೂ ಅದೇ ದಿನ ಹೊರಬೀಳಲಿದೆ. ಅಕ್ಟೋಬರ್ 14 ರಂದು ಎ13 ದೀಪಕ್​ಗೆ ಜಾಮೀನು ಸಿಗುವುದು ಖಾತ್ರಿಯಾಗಿದೆ. ಏಕೆಂದರೆ ದೀಪಕ್​ ಗೆ ಜಾಮೀನು ನೀಡಲು ಎಸ್​ಪಿಪಿ ತಕರಾರು ಎತ್ತಿಲ್ಲ. ಆದರೆ ಇನ್ನುಳಿದ ಯಾವುದೇ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದಿದ್ದಾರೆ.