ಮೈಸೂರು(Mysuru) : ದಸರಾ ಕವಿಗೋಷ್ಠಿ ಸಾಹಿತ್ಯಾಸಕ್ತರು ಕಾತರದಿಂದ ಕಾಯುವ ಪ್ರಮುಖ ಕಾರ್ಯಕ್ರಮ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಬೇಜವಬ್ದಾರಿತನದಿಂದಾಗಿ ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ಮೃತಪಟ್ಟ ಕವಿಯ ಹೆಸರು ಸೇರಿಸಿ ಎಡವಟ್ಟು ಮಾಡಿದೆ.
ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿ.ಕೆ.ರವೀಂದ್ರ ಕುಮಾರ್ ಅವರ ಹೆಸರನ್ನು ಸೇರಿಸಲಾಗಿದೆ. ಇದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿ ವೈರಲ್ ಆಗಿದೆ,
ಇದು ತಿಳಿಯುತ್ತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ರವಾನಿಸಿದೆ. ಈ ಕುರಿತು ಸಮಿತಿ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂಜಿ ಮಂಜುನಾಥ್ ಅವರನ್ನು ವಿಚಾರಿಸಿದರೆ ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಹೆಸರಿತ್ತು ಅದನ್ನು ತೆಗೆಸಿ ಹೊಸದನ್ನು ನೀಡಲಾಗಿದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ರವೀಂದ್ರ ಕುಮಾರ್ ಹೆಸರನ್ನು ನೀಡಿದವರು ಯಾರು ಎಂದು ಕೇಳಿದರೆ ಸಮರ್ಪಕ ಉತ್ತರ ಅವರಿಂದ ಬರಲಿಲ್ಲ.
ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡುವುದು ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಎಷ್ಟೇ ಅಕಾಡೆಮಿ ಸದಸ್ಯ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ.
ಇದು ಮಾತ್ರವಲ್ಲದೇ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸಿದ್ದಾರೆ. ಏಕೆಂದರೆ ಆಹ್ವಾನ ಪತ್ರಿಕೆಯಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯ ಎಂದಿರುವುದು ಇಂತಹ ಅನುಮಾನ ಹುಟ್ಟು ಹಾಕುವಂತೆ ಮಾಡಿದೆ.
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
ರಾಮ್ ಲಲ್ಲಾನಿಗೆ ನಡೆಯುತ್ತಿದೆ ಅಯೋಧ್ಯೆಯಲ್ಲಿ ಅಭಿಷೇಕ.
ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ…
ಬೋರ್ನ್ವಿಟಾ ಆರೋಗ್ಯಕ್ಕೆ ಹಾನಿಕಾರವೇ ?
BJP ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ…
ಭಾರತದಲ್ಲಿ ಏರಿಕೆಯಾದ ಶ್ರೀಮಂತರ ಸಂಖ್ಯೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.