ಮನೆ ಕ್ರೀಡೆ ಡಿ. 20, 21ರಂದು ಸರ್ಕಾರಿ ನೌಕರರ ಕ್ರೀಡಾಕೂಟ: ಡಾ. ಮಂಜುನಾಥ್ ಸ್ವಾಮಿ

ಡಿ. 20, 21ರಂದು ಸರ್ಕಾರಿ ನೌಕರರ ಕ್ರೀಡಾಕೂಟ: ಡಾ. ಮಂಜುನಾಥ್ ಸ್ವಾಮಿ

0

ಮೈಸೂರು(Mysuru): ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿಸೆಂಬರ್ 20 ಹಾಗೂ 21 ರಂದು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥ ಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸರ್ಕಾರಿ ನೌಕರರ ಸಹಯೋಗದಲ್ಲಿ ನಡೆಯುತ್ತಿರುವ ಕ್ರೀಡಾಕೂಟ ವ್ಯವಸ್ಥಿತ ಹಾಗೂ ಅಚ್ಚುಕಟ್ಟಾಗಿ ನಡೆಯಲಿ ಎಂದರು.

ಡಿಸೆಂಬರ್ 20 ರ ಬೆಳಗ್ಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಪಂದ್ಯಾವಳಿ ಉದ್ಘಾಟನೆಗೊಂಡು 21 ರ ಸಂಜೆ ಸಮಾರೋಪ ಜರುಗಲಿದೆ ಹಾಗೂ ಎರಡು ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ಚಾಮುಂಡಿ ಕ್ರೀಡಾಂಗಣದಲ್ಲಿ 16 ಕ್ರೀಡೆಗಳು ಸೇರಿದಂತೆ ಸ್ಪೋರ್ಟ್ಸ್ ಪೆವಿಲಿಯನ್, ರೋಟರಿ ವಿಸ್ಟ್, ಹಾಗೂ ಮಹಾರಾಜ ಕಾಲೇಜು ಕ್ರಿಕೆಟ್ ಮೈದಾನ ಸೇರಿದಂತೆ ಒಟ್ಟು 20 ಕ್ರೀಡೆಗಳು ನಡೆಯಲಿವೆ ಎಂದರು.

ಆಹ್ವಾನ ಪತ್ರಿಕೆ ಹಾಗೂ ಗಣ್ಯರನ್ನು ಶಿಷ್ಟಾಚಾರದಂತೆ ಆಹ್ವಾನಿಸಿ. ಭಾಗವಹಿಸುವ ಕ್ರೀಡಾಪಟುಗಳಿಗೆ ಶುಚಿ ರುಚಿಯಾದ ಹಾಗೂ ಆರೋಗ್ಯಕರವಾದ ಉಪಹಾರ ಒದಗಿಸುವ ಕ್ರಮವಹಿಸಿ ಎಂದರು.

ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಬಂದೋಬಸ್ತ್ ಹಾಗೂ ಆರೋಗ್ಯ ಉತ್ತಮ ವೈದ್ಯಕೀಯ ವ್ಯವಸ್ಥೆ ಶುದ್ಧ ಕುಡಿಯುವ ನೀರು ಒದಗಿಸುವ ಮೂಲಕ ಕ್ರೀಡೆಗಳು ಸೌಹಾರ್ದಯುತವಾಗಿ ಜರುಗಲಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಪ್ರೇಮ್ ಕುಮಾರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೋಹಿತ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಮೈಸೂರು: ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಕ್ಕೆ ಚಾಲನೆ
ಮುಂದಿನ ಲೇಖನಇಲ್ಲಿರುವ ದೇವತೆಯು ಮೂಕಾಂಬಿಕಾ