ಮೈಸೂರು : ಡಾ.ಪ್ರಕಾಶ್ ಬಿ.ನಾಯಕ್ ಅವರ ಮಾರ್ಗದರ್ಶನದಲ್ಲಿ ದೀಪ ದರ್ಶಿನಿ ಜಿ.ಪಿ. ಅವರು ಸಂಶೋಧನೆ ನಡೆಸಿ ಸಾದರ ಪಡಿಸಿದ ‘ಕನ್ಸ್ಯೂಮರ್ ಪೋಸ್ಟ್ ಬಿಹೇವಿಯರ್ ಆನ್ ಗ್ರೀನ್ ಪ್ರಾಡಕ್ಟ್ಸ್ ಇನ್ ಕರ್ನಾಟಕ ಎ ಸ್ಟಡಿ’ ಎಂಬ ಆಂಗ್ಲ ಭಾಷೆಯಲ್ಲಿ ಸಿದ್ಧಪಡಿಸಿರುವ ಮಹಾ ಪ್ರಬಂಧವನ್ನು ವಾಣಿಜ್ಯ ಶಾಸ್ತ್ರ ವಿಷಯದಲ್ಲಿ ಪಿಹೆಚ್.ಡಿ. ಪದವಿಗಾಗಿ ೨೦೧೭ರ ಮೈಸೂರು ವಿಶ್ವವಿದ್ಯಾನಿಲಯದ ಪಿಹೆಚ್.ಡಿ. ನಿಯಮಾವಳಿಯಡಿಯಲ್ಲಿ ಅಂಗೀಕರಿಸಲಾಗಿದೆ ಎಂದು ಮೈಸೂರು ವಿವಿ ಕುಲಸಚಿವರಾದ (ಪರೀಕ್ಷಾಂಗ) ಪ್ರೊ. ಎನ್.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














