ಐಪಿಎಲ್ ಆರಂಭಕ್ಕೆ ಇನ್ನೇರಡು ದಿನ ಬಾಕಿ ಇರುವಾಗ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನಾಯಕನನ್ನು ಬದಲಾಯಿಸಿದೆ.
ಅದರಂತೆ ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ನಾಯಕತ್ವದಿಂದ ಕೆಳಗಿಳಿದಿದ್ದು, ತಂಡದ ಮಾಜಿ ನಾಯಕ ರಿಷಬ್ ಪಂತ್ ಮತ್ತೊಮ್ಮೆ ತಂಡದ ಚುಕ್ಕಾಣಿ ಹಿಡಿದಿದ್ದಾರೆ.
ಎಲ್ಲರಿಗೂ ತಿಳಿದಿರುವಂತೆ 2023 ರ ಡಿಸೆಂಬರ್ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಅಂದಿನಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಅಪಘಾತದಿಂದಾಗಿ ಪಂತ್ ಪ್ರಮುಖ ಐಸಿಸಿ ಈವೆಂಟ್ಗಳನ್ನು ಕಳೆದುಕೊಂಡಿದಲ್ಲದೆ ಐಪಿಎಲ್ ನಿಂದಲ್ಲೂ ಹೊರಬಿದ್ದಿದ್ದರು.
ಆದರೀಗ ಪೂರ್ಣ ಚೇತರಿಸಿಕೊಂಡು ಕ್ರಿಕೆಟ್ ಅಂಗಳಕ್ಕಿಳಿಯಲು ಸಜ್ಜಾಗಿರುವ ಪಂತ್, ಐಪಿಎಲ್ ಮೂಲಕ ವೃತ್ತಿಪರ ಕ್ರಿಕೆಟ್ಗೆ ಕಾಲಿಡುತ್ತಿದ್ದಾರೆ. ಹೀಗಾಗಿ ಕಳೆದ ಆವೃತ್ತಿಯಲ್ಲಿ ಪಂತ್ ಅಲಭ್ಯತೆಯಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ತಂಡದ ಖಾಯಂ ನಾಯಕ ರಿಷಬ್ ಪಂತ್ಗೆ ನಾಯಕತ್ವವನ್ನು ಬಿಟ್ಟುಕೊಟ್ಟಿದ್ದಾರೆ.
ವಾಸ್ತವವಾಗಿ ಐಪಿಎಲ್ ಆರಂಭಕ್ಕೂ ಮುನ್ನ ಪಂತ್ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಬಹುದು ಎಂದು ವರದಿಯಾಗಿತ್ತು. ಏಕೆಂದರೆ ಇಂಜುರಿಯಿಂದ ಚೇತರಿಸಿಕೊಂಡಿರುವ ಪಂತ್ಗೆ ಏಕಾಏಕಿ ವಿಕೆಟ್ ಕೀಪಿಂಗ್ ಜೊತೆಗೆ ತಂಡದ ನಾಯಕತ್ವ ನೀಡುವ ಬದಲು ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಬಹುದು ಎಂದು ವರದಿ ಹೇಳಿತ್ತು.
ಇದಕ್ಕೆ ಪೂರಕವಾಗಿ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಕೂಡ ಪಂತ್ ಆಟಗಾರನಾಗಿ ಆಡಲಿದ್ದಾರೆ ಎಂದು ಹೇಳಿದ್ದರು. ಆದರೀಗ ಡೆಲ್ಲಿ ಫ್ರಾಂಚೈಸ್ ರಿಷಬ್ ಪಂತ್ಗೆ ನಾಯಕತ್ವ ಹಸ್ತಾಂತರಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಹೀಗಾಗಿ ಈ ಆವೃತ್ತಿಯಿಂದ ಪಂತ್ ಡೆಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಡೆಲ್ಲಿ ತಂಡ: ರಿಷಭ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ರಿಕಿ ಭುಯಿ, ಶಾಯ್ ಹೋಪ್, ಪೃಥ್ವಿ ಶಾ, ಹ್ಯಾರಿ ಬ್ರೂಕ್, ಯಶ್ ಧುಲ್, ಸ್ವಸ್ತಿಕ್ ಚಿಕಾರಾ, ಡೇವಿಡ್ ವಾರ್ನರ್, ಪ್ರವೀಣ್ ದುಬೆ, ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ವಿಕಿ ಓಸ್ತ್ವಾಲ್, ಸುಮಿತ್ ಕುಮಾರ್ , ಅನ್ರಿಚ್ ನೋಕಿಯಾ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಕುಲ್ದೀಪ್ ಯಾದವ್, ಇಶಾಂತ್ ಶರ್ಮಾ, ಜೇಕ್ ಫ್ರೇಸರ್-ಮೆಕ್ಗುರ್ಕ್, ಜ್ಯೆ ರಿಚರ್ಡ್ಸನ್, ರಾಸಿಖ್ ಸೇಲಂ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.