ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ(Newdelhi): ನಗರದ ಹೊರಭಾಗದ ಸುಲ್ತಾನ್ಪುರಿಯಲ್ಲಿನ ಯುವತಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು 3 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ದೀಪಕ್ ಖನ್ನಾ (26), ಅಮಿತ್ ಖನ್ನಾ (25), ಕೃಷ್ಣಾ (27), ಮಿಥುನ್ (26) ಮತ್ತು ಮನೋಜ್ ಮಿತ್ತಲ್ ಎಂಬುವರನ್ನು ಬಂಧಿತ ಆರೋಪಿಗಳಾಗಿದ್ದು, ಇವರ ವಿರುದ್ಧ ಐಪಿಸಿ ಸೆಕ್ಷನ್ 279 ಮತ್ತು 304–ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ 20 ವರ್ಷದ ಯುವತಿಯೊಬ್ಬರು ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 4 ಕಿ.ಮೀ.ವರೆಗೂ ಎಳೆದೊಯ್ದಿರುವ ಘಟನೆ ದೆಹಲಿಯ ಹೊರಭಾಗದ ಸುಲ್ತಾನ್ಪುರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿತ್ತು.
ಮಾರುತಿ ಬಲೆನೊ ಕಾರಿನಲ್ಲಿದ್ದ ಐವರನ್ನು ಬಂಧಿಸಿದ ದೆಹಲಿ ಪೊಲೀಸರು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ರಸ್ತೆಯ ಮೇಲೆ ಯುವತಿಯ ಮೃತದೇಹ ನಗ್ನಾವಸ್ಥೆಯಲ್ಲಿ ಬಿದ್ದಿರುವ, ಆಕೆಯ ಕಾಲುಗಳು ಮುರಿದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿತ್ತು.
ಕುತುಬ್’ಗಡ ಪ್ರದೇಶದತ್ತ ಹೊರಟಿದ್ದ ಕಾರಿನಡಿ ಯುವತಿಯ ಮೃತದೇಹ ಸಿಲುಕಿತ್ತು.ಆಕೆಯ ಮೃತದೇಹವನ್ನು ಸುಮಾರು 4 ಕಿ.ಮೀ. ವರೆಗೂ ಎಳೆದೊಯ್ಯಲಾಗಿತ್ತು. ರೋಹಿಣಿ ಜಿಲ್ಲೆಯ ಖಂಜಾವಲಾ ಪೊಲೀಸ್ ಠಾಣೆಗೆ ಬೆಳಿಗ್ಗೆ 3.24ರ ಸುಮಾರಿಗೆ ಈ ಕುರಿತ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ಹೋಗಿದ್ದ ಸಿಬ್ಬಂದಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗೋಲ್ ಪುರಿಯಲ್ಲಿರುವ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಿದ್ದರು ಎಂದು ಪೊಲೀಸರು ತಿಳಿಸಿದ್ದರು.