ಗಲಭೆ ಪ್ರಕರಣಗಳಲ್ಲಿ ಅನಗತ್ಯ ಸಾಕ್ಷಿಗಳನ್ನು ಕೈಬಿಡುವಂತೆ ಪದೇ ಪದೇ ನ್ಯಾಯಾಲಯ ಸೂಚಿಸಿದ್ದರೂ ಪ್ರಾಸಿಕ್ಯೂಷನ್ ಕ್ರಮ ಕೈಗೊಂಡಿಲ್ಲ ಎಂದು ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಪ್ರಾಸಿಕ್ಯೂಷನ್ಅನ್ನು ತರಾಟೆಗೆ ತೆಗೆದುಕೊಂಡು ದಂಡ ವಿಧಿಸಿದ ಘಟನೆ ಇತ್ತೀಚೆಗೆ ನಡೆದಿದೆ.
“ಗಲಭೆ ಪ್ರಕರಣಗಳಲ್ಲಿ ಅನಗತ್ಯ ಸಾಕ್ಷಿಗಳನ್ನು ಕೈಬಿಡುವಂತೆ ಮತ್ತೆ ಮತ್ತೆ ನ್ಯಾಯಾಲಯ ಸೂಚಿಸಿದ್ದರೂ ಸಾಕ್ಷಿಗಳ ಮತ್ತು ನ್ಯಾಯಾಲಯದ ಸಮಯದ ಬಗ್ಗೆಯಾಗಲಿ, ಸಾರ್ವಜನಿಕ ಬೊಕ್ಕಸದ ಬಗ್ಗೆಯಾಗಲಿ ಗೌರವ ತೋರಿಲ್ಲ. ಹೀಗಾಗಿ ಪ್ರಾಸಿಕ್ಯೂಷನ್ಗೆ ₹ 5,000 ದಂಡ ವಿಧಿಸುವಂತಾಗಿದೆ. ಮುಂದಿನ ವಿಚಾರಣೆ ಹೊತ್ತಿಗೆ ದಂಡದ ಮೊತ್ತವನ್ನು ಪಾವತಿಸಬೇಕು. ಈಶಾನ್ಯ ವಿಭಾಗದ ಡಿಸಿಪಿಯು ಹೊಣೆಗಾರಿಕೆಯನ್ನು ಹೊರಿಸುವ ಸಲುವಾಗಿ ವಿಚಾರಣೆ ನಡೆಸಬೇಕು ಹಾಗೂ ಕಾರಣಕರ್ತರಾದವರಿಂದ ದಂಡದ ಮೊತ್ತವನ್ನು ವಸೂಲಿ ಮಾಡುವ ಹೊಣೆ ವಹಿಸಿಕೊಳ್ಳಬೇಕು” ಎಂದು ನ್ಯಾಯಾಲಯ ಹೇಳಿದೆ.
ಎಲ್ಲಾ ದಂಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ಗಳು ಮತ್ತು ತನಿಖಾಧಿಕಾರಿಗಳು ತಮ್ಮ ಪ್ರಕರಣಗಳನ್ನು ಪರಿಶೀಲಿಸಿ ಯಾವುದೇ ಅನಗತ್ಯ ಸಾಕ್ಷಿಗಳಿದ್ದರೆ ಅವರ ವಿರುದ್ಧ ಸಮನ್ಸ್ ನೀಡದೆ ಅವರನ್ನು ಕೈಬಿಡಲು ಅರಿವು ಮೂಡಿಸಬೇಕು ಎಂದು ಕೂಡ ನ್ಯಾಯಾಲಯ ಡಿಸಿಪಿ ಅವರಿಗೆ ಹೇಳಿದೆ.
ಪ್ರಸಕ್ತ ಪ್ರಕರಣದಲ್ಲಿ ಘಟನೆಯು ಫೆಬ್ರವರಿ 24 ಮತ್ತು 25, 2020ರ ಮಧ್ಯರಾತ್ರಿ12ರಿಂದ 1 ಗಂಟೆ ಅವಧಿಯ ನಡುವೆ ನಡೆದಿರುವುದು ವರದಿಯಾಗಿದ್ದು ಸಿಆರ್ಪಿಸಿ ಸೆಕ್ಷನ್ 161ರ ಅಡಿಯಲ್ಲಿ ಪೊಲೀಸರ ಮುಂದೆ ಹೇಳಿಕೆಯನ್ನು ಫೆಬ್ರವರಿ 25, 2020ರಂದು ಸಂಜೆ 6 ಗಂಟೆಗೆ ದಾಖಲಿಸಿದ್ದರಿಂದ ಸಾಕ್ಷಿಯನ್ನು ಪರೀಕ್ಷೆಯಿಲ್ಲದೆ ಕೈಬಿಡಬೇಕಾಯಿತು. ಆದ್ದರಿಂದ ಅಂತಹ ಸಾಕ್ಷಿ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ತಿಳಿಸಿದ ನ್ಯಾಯಾಲಯ ಅವರನ್ನು ಪ್ರಕರಣದಿಂದ ಕೈಬಿಟ್ಟಿತು. ನವೆಂಬರ್ 30 ರಂದು ಸಾಕ್ಷಿಗಳ ವಿಚಾರಣೆ ಮುಂದುವರೆಯಲಿದೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.