ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಿಕ್ಕಬಳ್ಳಾಪುರ(Chikkaballapura): ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧನಿಗೆ ಭೂಮಿ ಮಂಜೂರು ಮಾಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಅಧಿಕಾರಿಗಳು ಹಾಗೂ ಓರ್ವ ರೈತ ಸಂಘದ ಮುಖಂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಂತಾಮಣಿ ನಗರದ ಭೂ ದಾಖಲೆ ಉಪನಿರ್ದೇಶಕರ ಕಚೇರಿಯ ಸರ್ವೇಯರ್ ನಾಗರಾಜ್, ಡಿ ಗ್ರೂಪ್ ನೌಕರ ಪ್ರಕಾಶ್, ರೈತ ಸಂಘದ ಮುಖಂಡ ಕದಿರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿರುವ ಆರೋಪಿಗಳು.
ತಾಲೂಕಿನ ಅಂಬಾಜಿದುರ್ಗ ಹೋಬಳಿ, ಉಪ್ಪರಪೇಟೆ ಗ್ರಾಮ ಪಂಚಾಯಿತಿಯ ರಾಯಪ್ಪಲ್ಲಿ ಗ್ರಾಮದ ಮಾಜಿ ಯೋಧ ಶಿವಾನಂದರೆಡ್ಡಿ, ಕಳೆದ 20 ವರ್ಷದಿಂದ ತಮಗೆ ಬರಬೇಕಾಗಿದ್ದ ಭೂಮಿ ಮಂಜೂರಾತಿಗಾಗಿ ಹೋರಾಟ ನಡೆಸುತ್ತಿದ್ದರು.
ತಾಲೂಕು ಅಧಿಕಾರಿಗಳು ಮಾತ್ರ ಹಣಕ್ಕಾಗಿ ಇಲ್ಲಸಲ್ಲದ ನೆಪಗಳನ್ನು ಹೇಳುತ್ತಿದ್ದರು. ಈ ವಿಷಯವಾಗಿ ಮಾಜಿ ಯೋಧ ಶಿವಾನಂದರೆಡ್ಡಿ ಅನೇಕ ಬಾರಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್, ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಿದ್ದರು. ಕಳೆದ ಮೂರು ತಿಂಗಳ ಹಿಂದೆ ನಗರದಿಂದ ಬೆಂಗಳೂರಿಗೆ ಕಾಲ್ನಡಿಗೆ ಜಾಥಾ ಸಹ ನಡೆಸಿದ್ದರು.
ಸದ್ಯ ಮಾಜಿ ಯೋಧನ ಮನವಿಗೆ ಭೂ ಮಂಜೂರಾತಿಗೆ ಸರ್ವೆ ಮಾಡಲು ಆದೇಶವಾಗಿತ್ತು. ಇದೇ ವಿಚಾರವಾಗಿ ಸರ್ವೇಯರ್, ಡಿ ಗ್ರೂಪ್ ನೌಕರ ಹಾಗೂ ರೈತ ಸಂಘದ ಮುಖಂಡ ಸೇರಿಕೊಂಡು 5 ಲಕ್ಷ ರೂಗೆ ಬೇಡಿಕೆ ಇಟ್ಟಿದ್ದರು. ಇದರಿಂದ ರೋಸಿಹೋದ ಯೋಧ ಶಿವಾನಂದರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಬುಧವಾರ ಆರೋಪಿಗಳು ಒಂದು ಲಕ್ಷ ರೂ ಪಡೆಯುತ್ತಿರುವಾಗ ಲೋಕಾಯುಕ್ತ ಎಸ್.ಪಿ ಪವನ್ ನಜ್ಜುರ್, ಡಿವೈಎಸ್ಪಿ ಭೂತೇಗೌಡ, ಇನ್ಸ್ ಸ್ಪೆಕ್ಟರ್ ಸಲೀಂ ನಡಾಫ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.