ಮನೆ ರಾಜ್ಯ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನಿರಾಕರಣೆ

ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನಿರಾಕರಣೆ

0

ಮೈಸೂರು(Mysuru): ಚಾಮುಂಡಿಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ, ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.

ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.

ಬೆಟ್ಟಕ್ಕೆ ತೆರಳುವ ವಾಹನಗಳನ್ನು ಪ್ರವೇಶಕ್ಕೆ ಮುನ್ನವೇ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅಲ್ಲಿ ಮಾಡಲಾಗಿದೆ.

ಮಹಿಷ ದಸರಾ ಆಚರಿಸಲು ಅನುಮತಿ ಕೋರಿ ತಮ್ಮ ಕಚೇರಿಗೆ ಯಾರೂ ಮನವಿ ಸಲ್ಲಿಸಿಲ್ಲ  ಎಂದು ಚಂದ್ರಗುಪ್ತ ಪ್ರತಿಕ್ರಿಯಿಸಿದರು.

ಹಿಂದಿನ ಲೇಖನಹೃದಯದ ಸಮಸ್ಯೆ ಇರುವವರು ಈ ಆಹಾರ ಜಾಸ್ತಿ ಸೇವಿಸಬಾರದು
ಮುಂದಿನ ಲೇಖನಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ರಮೇಶ್ ಅರವಿಂದ್ ಆಯ್ಕೆ