ಮೈಸೂರು: ಡಿಸೆಂಬರ್ 22 ರಂದು ಸಂಜೆ 5:15ಕ್ಕೆ ನಾಡ ದೇವತೆ ಶ್ರೀ ಚಾಮುಂಡೇಶ್ವರಿಯಮ್ಮನವರ ಮೆರವಣಿಗೆಯಲ್ಲಿ ಅರಮನೆಯ ರಾಜಲಾಂಛನ ಬಿರುದು-ಬಾವಲಿಗಳು ಹಾಗೂ ವಿವಿಧ ಕಲಾ ಪ್ರಕಾರಗಳೊಂದಿಗೆ ಸಾಗುವ ರಥೋತ್ಸವಕ್ಕೆ ಚಾಲನೆ ಕಾರ್ಯಕ್ರಮ, ಸಂಜೆ 5.30 ಕ್ಕೆ ಅರಮನೆ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ, ಸಂಜೆ 6 ರಿಂದ 6:45 ರವರೆಗೆ ಎ.ಎಂ ಗುರುರಾಜ್ ಮತ್ತು ತಂಡದವರಿoದ ವಾದ್ಯ ಸಂಗೀತ ಕಾರ್ಯಕ್ರಮ, ಸಂಜೆ 6:45 ರಿಂದ 7 ರವರೆಗೆ ಕೆ.ಆರ್ ಕಲಾ ತಂಡವರಿoದ ನಾಡಗೀತೆ ಮತ್ತು ಮೈಸೂರು ಸಂಸ್ಥಾನ ಗೀತೆ ಮತ್ತು ಸಂಜೆ 7.15 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ, ಸಂಜೆ 7:20 ರಿಂದ ಖ್ಯಾತ ಹಿನ್ನೆಲೆ ಗಾಯಕರಾದ ಮನೋ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿ.23 ರಂದು ಸಂಜೆ 5:45 ರಿಂದ 6:30 ರವರೆಗೆ ಹನುಮಂತರರಾಜು ಅವರಿಂದ ಲಯ-ನಾದ ತರಂಗ ಸಂಗೀತ ಮಿಲನ ಹಾಗೂ ಸಂಜೆ 6.30 ಕ್ಕೆ ಕಿಶನ್ ಬಿಳಿಗಲಿ, ದಿ ಅಕಾಡೆಮಿ ಆಫ್ ಡ್ಯಾನ್ಸ್ ಅವರಿಂದ ನೃತ್ಯ ಕಾರ್ಯಕ್ರಮ, ಸಂಜೆ 7:45 ರಿಂದ ಏಕಾಂಬರoಲಕ್ಷ್ಮೀ ನಾರಾಯಣ ಇವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿ.24 ರಂದು ಸಂಜೆ 5:45 ರಿಂದ 6:30ವರೆಗೆ ರೆನ್ಸಿ ಎನ್ ಯೋಗೇಶ್ ತಂಡದಿoದ ಕರಾಟೆ ಇಂಡಿಯಾ ಸಮರಕಲ ಪ್ರದರ್ಶನ, ಸಂಜೆ 6:30 ರಿಂದ 7.15 ರವರೆಗೆ ಹೇಮಲತಾ ಕುಮಾರಸ್ವಾಮಿ ಮತ್ತು ತಂಡದವರಿoದ ಸುಗಮ ಸಂಗೀತ, ಸಂಜೆ 7:30 ರಿಂದ 9:30 ಹೇಮಂತ್, ಶಮಿತ ಮಲ್ನಾಡ್, ಪೃಥ್ವಿಭಟ್, ಅಶ್ವಿನ್ಶರ್ಮ, ಅಂಕಿತಾ ಕುಂಡು ಮತ್ತು ತಂಡದವರಿoದ ಸಂಗೀತಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿ.25 ರಂದು ಸಂಜೆ 6 ರಿಂದ 7 ಗಂಟೆವರೆಗೆ ನಾಗಲಕ್ಷ್ಮಿ ಮತ್ತು ತಂಡದವರಿoದ ನೃತ್ಯ ಕಾರ್ಯಕ್ರಮ, ಸಂಜೆ 7 ರಿಂದ 8 ಗಂಟೆಯವರೆಗೆ ವಿದ್ಯಾಭೂಷಣ್ ಮತ್ತು ರಘುಪತಿ ಭಟ್ ಅವರಿಂದ ಕುಂಚ ಗಾಯನ, ಸಂಜೆ 8 ರಿಂದ 10 ಗಂಟೆಯವರೆಗೆ ಎಂ ಡಿ ಪಲ್ಲವಿ ಮತ್ತು ತಂಡದವರಿoದ ಸುಗಮ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಡಿ.31 ರಂದು ರಾತ್ರಿ 11 ರಿಂದ 12 ಗಂಟೆವರೆಗೆ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ಮತ್ತು ಆಂಗ್ಲ ಬ್ಯಾಂಡ್ ಕಾರ್ಯಕ್ರಮ, ಮಧ್ಯರಾತ್ರಿ 12 ರಿಂದ 12:15 ರವರೆಗೆ ಮೈಸೂರು ಅರಮನೆ ಮಂಡಳಿ ವತಿಯಿಂದ ಹೊಸ ವರ್ಷಾಚರಣೆ ಪ್ರಯುಕ್ತ ವಿವಿಧ ಬಣ್ಣಗಳ ಚಿತ್ತಾರ ಕೂಡಿದ ಶಬ್ದರಹಿತ ಹಸಿರು ಪಟಾಕಿ ಸಿಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೊತೆಗೆ ಬೊಂಬೆಗಳ ಪ್ರದರ್ಶನ ಛಾಯಾಚಿತ್ರ ಪ್ರದರ್ಶನ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.