ಮನೆ ರಾಜ್ಯ ಮೋದಿ ಭೇಟಿ ವೇಳೆ ಅಭಿವೃದ್ಧಿಪಡಿಸಿದ್ದ ರಸ್ತೆ ಕುಸಿತ: ಮೂವರು ಇಂಜಿನಿಯರ್​ಗೆ ಶೋಕಾಸ್ ನೋಟಿಸ್

ಮೋದಿ ಭೇಟಿ ವೇಳೆ ಅಭಿವೃದ್ಧಿಪಡಿಸಿದ್ದ ರಸ್ತೆ ಕುಸಿತ: ಮೂವರು ಇಂಜಿನಿಯರ್​ಗೆ ಶೋಕಾಸ್ ನೋಟಿಸ್

0

ಬೆಂಗಳೂರು(Bengaluru): ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗಿದ್ದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದ ಪ್ರಕರಣ ಸಂಬಂಧ ಕಾಮಗಾರಿ ನಿರ್ವಹಿಸಿದ್ದ ಬಿಬಿಎಂಪಿಯ ಮೂವರು ಇಂಜಿನಿಯರ್​ಗಳಿಗೆ ಶೋಕಾಸ್​ ನೋಟಿಸ್​ ನೀಡಿಲಾಗಿದೆ.

ಆರ್​​.ಆರ್​​​.ನಗರ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಎಂ.ಟಿ.ಬಾಲಾಜಿ, ಆರ್​​​.ಆರ್​​​.ನಗರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​ ಇಂಜಿನಿಯರ್​​ ಹೆಚ್​.ಜೆ.ರವಿ, ಆರ್​​.ಆರ್​​​.ನಗರ ಅಸಿಸ್ಟೆಂಟ್​ ಇಂಜಿನಿಯರ್​​ ಐ.ಕೆ.ವಿಶ್ವಾಸ್​ಗೆ ಪಾಲಿಕೆಯಿಂದ ನೋಟಿಸ್​ ನೀಡಲಾಗಿದೆ.

ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಪ್ರಧಾನಿ ಮೋದಿ ಸಾಗುವ ರಸ್ತೆ ಅಭಿವೃದ್ಧಿಗಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸುಮಾರು 23 ಕೋಟಿ ರೂ. ವೆಚ್ಚ ಮಾಡಿತ್ತು.

ನೋಟಿಸ್​ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಾಮಗಾರಿಗಳ ಪೈಕಿ ಜ್ಞಾನಭಾರತಿಯ ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಈ ರಸ್ತೆ ಇದೀಗ ಕುಸಿದು ಹೋಗಿದೆ. ಆದ್ದರಿಂದ ರಸ್ತೆ ಕಾಮಗಾರಿ ನಿರ್ವಹಿಸಿದ್ದ ಮೂವರು ಇಂಜಿನಿಯರ್​ಗಳಿಗೆ ಬಿಬಿಎಂಪಿಯ ರೋಡ್​ ಇನ್​ಫ್ರಾಸ್ಟ್ರಕ್ಚರ್​​​​ ಚೀಫ್​​ ಇಂಜಿನಿಯರ್​ ಶೋಕಾಸ್ ನೋಟಿಸ್​ ನೀಡಿದ್ದಾರೆ ಎಂದು ತಿಳಿಸಿದ್ದಾರೆ.