ಮೈಸೂರು: ನಗರದ ಹೂಟಗಳ್ಳಿಯ ಕರಾವಳಿ ಸಾಂಸ್ಕೃತಿಕ ಚಾವಡಿಯ ದಶಮಾನೋತ್ಸವದ ಪ್ರಯುಕ್ತ ಹೂಟಗಳ್ಳಿಯ ಶ್ರೀ ಸರ್ವ ಸಿದ್ದಿ ಪ್ರದಾಯಕ ಗಣಪತಿ ದೇವಸ್ಥಾನ ಮತ್ತು ಸರಸ್ವತಿ ಕನ್ವೆನ್ಷನ್ ಹಾಲ್ ಹಿಂಭಾಗ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಂಗಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ಬಹಳ ಯಶಸ್ವಿಯಾಗಿ ಪ್ರದರ್ಶನಗೊಂಡಿತು.
ಕರಾವಳಿ ಸಾಂಸ್ಕೃತಿಕ ಚಾವಡಿ ಸುಮಾರು 10 ವರ್ಷಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮುಖೇನ ಎಲ್ಲಾ ಕರಾವಳಿಯ ಜನರಿಗೆ ಮತ್ತು ಮೈಸೂರಿನ ಜನತೆಗೆ ಕರಾವಳಿ ಪ್ರದೇಶದ ಸಂಸ್ಕೃತಿಯನ್ನು ತೋರಿಸಿಕೊಡುವ ಪ್ರಯತ್ನವನ್ನು ಮಾಡಿಕೊಂಡು ಬಂದಿದೆ.
ಶ್ರೀ ಚಾಮುಂಡೇಶ್ವರಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಕರಾವಳಿ ಪ್ರದೇಶದ ಜನರು ಮತ್ತು ಮೈಸೂರಿನ ಜನತೆ ಸುಮಾರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನವನ್ನು ವೀಕ್ಷಿಸಿ ಆನಂದ ಪಟ್ಟರು. ವಿಶೇಷತೆಯಾಗಿ ಚಾಮುಂಡೇಶ್ವರಿ ದೇವಿಯನ್ನು ಕ್ರೇನ್ ಮೂಲಕ ಬಹಳ ಎತ್ತರದಿಂದ ಭಕ್ತಾದಿಗಳಿಗೆ ದರ್ಶನವನ್ನು ನೀಡುವ ಪರಿಯಂತೂ ಬಹಳ ಅದ್ಭುತವಾಗಿತ್ತು. ಮಹಿಷಾಸುರನ ಅಬ್ಬರದ ಪ್ರವೇಶವಂತು ಎಲ್ಲರನ್ನು ಮುಖವಿಸ್ಮಿತರನ್ನಾಗಿ ಮಾಡಿತ್ತು.
ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಡಾಕ್ಟರ್ ದಿನೇಶ್ ಶೆಟ್ಟಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಕಾರ್ಯದರ್ಶಿ ರಾಕೇಶ್ ರೈ ಎ , ಖಜಾಂಚಿ ಆದಿತ್ಯ, ಉಪಾಧ್ಯಕ್ಷ ಹರೀಶ್, ಐತ್ತಪ್ಪ, ಶುಭಂ ಪೂಜಾರಿ ಹಾಗೂ ಸಂಘದ ಸರ್ವ ಸದಸ್ಯರು ಈ ಯಕ್ಷಗಾನದಲ್ಲಿ ಹಾಜರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.