ಮನೆ ಅಪರಾಧ ಧರ್ಮಸ್ಥಳ ಬುರುಡೆ ಪ್ರಕರಣ ಬೆಂಗಳೂರಿಗೆ ಲಿಂಕ್..!

ಧರ್ಮಸ್ಥಳ ಬುರುಡೆ ಪ್ರಕರಣ ಬೆಂಗಳೂರಿಗೆ ಲಿಂಕ್..!

0

ಬೆಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರಿಯಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಬಿಗಿಭದ್ರತೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಹೋಗಲಾಗಿದೆ.

ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ ಮಹಜರಿಗೆ ಕರೆತರಲಾಗಿದ್ದು, ಎರಡು ಪೊಲೀಸ್ ವಾಹನದಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ತಮಿಳುನಾಡು, ಮಂಡ್ಯ ಕಡೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಈಗ ಧರ್ಮಸ್ಥಳ ಕೇಸ್‌ಗೆ ಬೆಂಗಳೂರು ಲಿಂಗ್ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬೆಳ್ತಂಗಡಿಯಿಂದ ಬೆಂಗಳೂರಿನತ್ತ ಚಿನ್ನಯ್ಯನನ್ನು ಕರೆತರಲಾಗುತ್ತಿದೆ.