ಯಾದಗಿರಿ: ಪ್ರಜ್ವಲ್ ರೇವಣ್ಣ ಅವರು ಡಿಕೆ ಶಿವಕುಮಾರ್ ಅವರ ಮಾತು ಕೇಳಿ ಸೆಕ್ಸ್ ವಿಡಿಯೋ ಮಾಡಿಕೊಂಡ್ರಾ? ಅಥವಾ ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ಸೆಕ್ಸ್ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ? ಅಥವಾ ಡಿಕೆ ಶಿವಕುಮಾರ್ ವಿಡಿಯೋ ಮಾಡಿದ್ರಾ? ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆಸುವ ಭರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳು ಇದ್ದ ಪೆನ್ಡ್ರೈವ್ ಬಿಡುಗಡೆಯಾಗುವದರ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಅಂತ ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ.
ಇದಕ್ಕೆ ಶರಣಬಸಪ್ಪ ದರ್ಶನಾಪುರ ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ವಿಡಿಯೋ ರೆಕಾರ್ಡ್ ಮಾಡಿಕೊಂಡು ಈಗ ಬೇರೆಯವರ ಮೇಲೆ ಹಾಕುತ್ತಿದ್ದಾರೆ. ಈ ವಿಡಿಯೋ ಬಿಡುಗಡೆ ಮಾಡಿದವರು ಯಾರು? ಎಷ್ಟು ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ದಾರೆ? ನೇಹಾ ಹಿರೇಮಠ ಕೊಲೆಯಾದಾಗ ಬಿಜೆಪಿ ಮತ್ತು ಜೆಡಿಎಸ್ನವರು ಆರೋಪಿಯನ್ನು ಎನ್ಕೌಂಟರ್ ಮಾಡಬೇಕು ಅಂದರು. ಈಗ ಬಿಜೆಪಿ, ಜೆಡಿಎಸ್ನವರು ಎಲ್ಲಿದ್ದಾರೆ? ಪ್ರಜ್ವಲ್ನನ್ನು ಎನ್ಕೌಂಟರ್ ಮಾಡಿ ಅಂತ ಯಾಕೆ ಹೇಳುತ್ತಿಲ್ಲ? ಸಾಮಾನ್ಯ ಜನರಿಗೆ ಒಂದು ನ್ಯಾಯ, ದೊಡ್ಡವರಿಗೆ ಒಂದು ನ್ಯಾಯನಾ? ಎಂದು ಪ್ರಶ್ನಿಸಿದರು.
ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಆಫರೇಷನ್ ನಾಥ್ ನಡೆಯಲಿದೆ, ಸರ್ಕಾರ ಪಥನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆಗೆ ಸಚಿವ ಶರಣಬಸಪ್ಪ ದರ್ಶನಾಪುರ ಪ್ರತಿಕ್ರಿಯಿಸಿ “ಆತ ಗಂಡಸು ಇದ್ದರೇ ರಾಜ್ಯದಲ್ಲಿ ಸರಕಾರ ರಚಿಸಲಿ. ಅವನು ಏನಾದರೂ ಗಂಡಸು ಇದ್ದರೆ ರಾಜ್ಯಕ್ಕೆ ಬಂದು, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಲಿ. ಮಹಾರಾಷ್ಟ್ರದಲ್ಲಿ ಅಲ್ಲಿ ಏನು ಕಡಿಯಲು ಆಗುತ್ತಿಲ್ಲ. ಆತ ನಮ್ಮ ರಾಜ್ಯದಲ್ಲಿ ಏನು ಕಡಿತಾನ. ಮಹಾರಾಷ್ಟ್ರದಲ್ಲಿ ಮೊದಲು ತಮ್ಮ ಸರಕಾರ ಉಳಿಸಿಕೊಳ್ಳಲಿ. ಅವರ ಸರಕಾರ ಅಲಗಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.
ಶಾಸಕರ ಹತ್ತಿರ ಹೋಗಿ ಕುರ್ಚಿ ಉಳಿಸಿಕೊಳ್ಳಲು ಕೈ ಕಾಲು ಹಿಡಿಯುತ್ತಿದ್ದಾರೆ. ಶಿಂಧೆ ಪರಿಸ್ಥಿತಿ ನಾಯಿಪಾಡು ಆಗಿದೆ. ಒಂದು ಕಡೆ ಬಿಜೆಪಿ, ಮತ್ತೊಂದು ಕಡೆ ಶಾಸಕರು ಗುಮ್ಮುತ್ತಿದ್ದಾರೆ. ಮೊದಲು ತಮ್ಮ ಸೀಟು ಉಳಿಸಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯವರು ನಾಚಿಕೆ ಮಾರಿಕೊಂಡು ಕುಂತಿದ್ದಾರೆ. ಜನರು ಯಾರಿಗೆ ಮತ ಹಾಕುತ್ತಾರೆ, ಅವರು ಅಧಿಕಾರ ಹಿಡಿಯುತ್ತಾರೆ. ಜನ ಅವರನ್ನು ಮೂಲೆಗೆ ತಳ್ಳಿದ್ದಾರೆ, ನಾಲ್ಕು ವರ್ಷ ಸುಮ್ಮನೆ ಕೂಡಲು ಹೇಳಿ. ಈಗಾಗಲೇ ವಿಧಾನಸಭೆಯಲ್ಲಿ 130 ಇದ್ದ ಶಾಸಕರ ಬಲ 66ಕ್ಕೆ ಇಳಿದಿದೆ. ಈಗ ಲೋಕಸಭೆಯಲ್ಲಿ 28 ಇದ್ದದ್ದು, ಜನ ಎಷ್ಟಕ್ಕೆ ಇಳಿಸುತ್ತಾರೆ ಗೊತ್ತಿಲ್ಲ. ಸ್ವಲ್ಪ ಬಾಯಿ ಮುಚ್ಚಿಕೊಂಡು ಸುಮ್ನೆ ಕೂಡಲು ಹೇಳಿ ಎಂದರು.
ಬಿಜೆಪಿಯವರಿಗೆ ಗೊತ್ತಿದೆ ಯಾವ ರಾಜ್ಯದಲ್ಲೂ ನಮಗೆ ಸಂಪೂರ್ಣ ಬಹುಮತ ಕೊಡಲ್ಲ ಅಂತ. ಅದಕ್ಕೆ ಶಾಸಕರನ್ನು ಖರೀದಿ ಮಾಡಿ ಸರ್ಕಾರ ಮಾಡಬೇಕು ಅಂದುಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವದಲ್ಲಿ ನ್ಯಾಯ ಸಮ್ಮತನಾ? ಮೋದಿ ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ, ಭ್ರಷ್ಟಾಚಾರ ರಹಿತ ಅಂತ ಹೇಳುತ್ತಾರೆ, ಮತ್ತೆ ರಾಜ್ಯದಲ್ಲಿ ಇವರ ನಾಯಕರು ಏನು ಮಾಡುತ್ತಿದ್ದಾರೆ. ಇವರು ಮಾಡುತ್ತಿರುವುದು ಸರಿನಾ ಎಂದು ಪ್ರಶ್ನಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.