ಬೆಂಗಳೂರು: ರಾಜ್ಯಕ್ಕೆ ಟಿಬಿ ನಿರೋಧಕ ಔಷಧಗಳ ತುರ್ತು ಪೂರೈಕೆಗೆ ಮನವಿ ಮಾಡಿ ಕೇಂದ್ರ ಆರೋಗ್ಯ ಸಚಿವರಿಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.
ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್, ೨೦೨೧ ರಿಂದಲೂ ರಾಜ್ಯಕ್ಕೆ ಟಿಬಿ ನಿರೋಧಕ ಔಷಧಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಮುಂದಿನ ೩ ತಿಂಗಳಿಗೆ ಅಗತ್ಯವಿರುವ ಔಷಧಗಳನ್ನು ರಾಜ್ಯ ದಾಸ್ತಾನು ಮಾಡಿಕೊಳ್ಳಬೇಕೆಂದು ಭಾರತ ಸರ್ಕಾರ ತನ್ನ ಇತ್ತೀಚಿನ ೨ ಸಂವಹನಗಳಲ್ಲಿ ತಿಳಿಸಿದೆ.
ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದ ನಂತರ ಎರಡನೇ ಸಂವಹನ ರಾಜ್ಯಕ್ಕೆ ಬಂದಿದೆ ಎಂದು ಪತ್ರದಲ್ಲಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯ ವಾರ್ಷಿಕವಾಗಿ ೮೦,೦೦೦ ಕ್ಕೂ ಹೆಚ್ಚು ರೋಗಿಗಳನ್ನು- ಮಾಸಿಕ ಆಧಾರದ ಮೇಲೆ ಸುಮಾರು ೬,೮೦೦ ಟಿಬಿ ರೋಗಿಗಳಿಗೆ ನಿರಂತರ ಚಿಕಿತ್ಸೆ ನೀಡಬೇಕು, ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಟಿಬಿ ನಿರೋಧಕ ಔಷಧಗಳನ್ನು ಖರೀದಿಸಲು ರಾಜ್ಯ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಆರೋಗ್ಯ ಇಲಾಖೆ ರಾಜ್ಯ ಹಣಕಾಸು ಇಲಾಖೆಗೆ ಔಷಧಗಳನ್ನು ಖರೀದಿಸುವುದಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.