ಮನೆ ರಾಜಕೀಯ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ನೇರವಾಗಿ ವರ್ಗಾವಣೆ: ಶೋಭಾ ಕರಂದ್ಲಾಜೆ

ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ನೇರವಾಗಿ ವರ್ಗಾವಣೆ: ಶೋಭಾ ಕರಂದ್ಲಾಜೆ

0

ಬೆಳಗಾವಿ: ಮೊದಲ ಬಾರಿ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ  ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ  ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು.

ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದರು.

ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ, ಎಸ್.ಪಿ.ಜಿ. ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದುಎಂದು ಹೇಳಿದರು.

ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಾಲ್ಕೂ ದಿಕ್ಕಿನಲ್ಲಿ ಊಟ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಉಪಸ್ಥಿತರಿದ್ದರು.