ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ವರುಣ ಕೈ ಕೊಟ್ಟ ಪರಿಣಾಮ ಜಲಕ್ಷಾಮದ ಆತಂಕ ಎದುರಾಗಿದೆ. ಕುಡಿಯುವ ನೀರಿಗೆ ಸಂಕಷ್ಟದ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಮಗಳೂರು ಜಿಲ್ಲಾಡಳಿತ, ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಲ ಮೂಲಗಳಿಂದ ಕೃಷಿಗೆ ನೀರನ್ನ ಉಪಯೋಗಿಸದಂತೆ ಸೂಚನೆ ನೀಡಲಾಗಿದೆ.
ಜಲ ಮೂಲಗಳಿಂದ ಕೃಷಿಗೆ ನೀರನ್ನ ಉಪಯೋಗಿಸದಂತೆ ಸೂಚನೆ ನೀಡಿದ ಜಿಲ್ಲಾಡಳಿತವು ಕೆರೆ, ಹಳ್ಳ ಬಾವಿಗಳಿಂದ ಕೃಷಿಗೆ ನೀರನ್ನ ಬಳಸದಂತೆ ಎಚ್ಚರಿಕೆ ನೀಡಿದೆ. ಪಾಂಪ್ ಸೆಟ್ ಮೂಲಕ ಕೃಷಿ ಚಟುವಟಿಕೆಗಳಿಗೆ ನೀರು ಬಳಸದಂತೆ ಆದೇಶಿಸಿದೆ.
ಸಹಾಯವಾಣಿ ಆರಂಭ
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತವು ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಸಹಾಯವಾಣಿ ತೆರೆದಿದೆ. ನೀರಿನ ಸಮಸ್ಯೆ ಇದ್ದರೆ 08262_228181 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಈ ಸೇವೆ ಲಭ್ಯವಿರಲಿದೆ.
ಇದೆ ಮೊದಲ ಬಾರಿಗೆ ಚಿಕ್ಕಮಗಳೂರು ತಾಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನಲ್ಲಿ ಜಲಕ್ಷಾಮ ಉಂಟಾಗಿದೆ. ನಗರದ ಪ್ರಮುಖ ಕೆರೆಗಳು ಸಂಪೂರ್ಣವಾಗಿ ಬರಿದಾಗಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಟ್ಯಾಂಕರ್ ಮಾಲೀಕರಿಗೆ ‘ನೊಂದಣಿ’ ಸೂಚನೆ
ಟ್ಯಾಂಕರ್ ಮಾಲೀಕರಿಗೆ ನೊಂದಣಿ ಮಾಡಲು ಸೂಚನೆ ನೀಡಲಾಗಿದ್ದು, ನೋಂದಣಿಗೆ ಮಾರ್ಚ್ 11 ಕೊನೆಯ ದಿನವಾಗಿದೆ. ಮಳೆ ಕೈ ಕೊಟ್ಟ ಹಿನ್ನೆಲೆ ಮಲೆನಾಡಿನಲ್ಲಿ ಹನಿಹನಿ ನೀರಿಗೂ ಸಂಕಷ್ಟ ಎದುರಾಗಿದ್ದು, ಯಗಚಿ ಜಲಾಶಯದಲ್ಲಿ ನೀರಿನ ಮಟ್ಟದಲ್ಲಿ ಭಾರೀ ಇಳಿಕೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಲಿರುವ ಹಿನ್ನೆಲೆ ಬೇಲೂರಿನ ಯಗಚಿ ಜಲಾಶಯದಿಂದ ನಗರಕ್ಕೆ ನೀರು ಸರಬರಾಜು ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.