ಮನೆ ಸ್ಥಳೀಯ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

0

ಮೈಸೂರು: ಮೈಸೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ  ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಜಯಂತಿಯ  ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ  “ಬಾಪೂಜಿ ಪ್ರಬಂಧ ಸ್ಪರ್ಧೆ” ಯಲ್ಲಿ ಪ್ರೌಢಶಾಲಾ, ಪದವಿ ಪೂರ್ವ ಶಿಕ್ಷಣ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ  ವಿಜೇತರಾದವರ ವಿವರ ಇಂತಿದೆ.

Join Our Whatsapp Group

ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ನಂಜನಗೂಡು  ಟಿ ಎನ್ ಪುರ ಮೇದಿನಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಿದ್ದರಾಜು,  ದ್ವಿತೀಯ ಸ್ಥಾನ ಕೆ.ಆರ್ ನಗರ ತಾಲೂಕು ಹನಸೋಗೆಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಎಂ.ಆರ್ ಮಹಾಲಕ್ಷ್ಮಿ  ಹಾಗೂ ತೃತೀಯ ಸ್ಥಾನ ನಂಜನಗೂಡಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಪ್ರೀತು.ವಿ ಅವರು ಪಡೆದಿರುತ್ತಾರೆ.

ಪದವಿಪೂರ್ವ ಶಿಕ್ಷಣ ವಿಭಾಗದಲ್ಲಿ ಪ್ರಥಮ ಸ್ಥಾನ ಮೈಸೂರಿನ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ   ಪರೀಕ್ಷಾ ನಂದ್, ದ್ವಿತೀಯ  ಸ್ಥಾನ ಲಕ್ಷ್ಮಿಪುರಂ   ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಂದನ ಎಂ. ಎಸ್  ಹಾಗೂ  ತೃತೀಯ ಸ್ಥಾನ ರಾವಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಾಹ್ನವಿ ಕೆ.ಯು ಅವರು  ಪಡೆದಿರುತ್ತಾರೆ.

ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಪ್ರಥಮ ಸ್ಥಾನ

 ಟಿ ನರಸೀಪುರ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾದಲಾಂಬಿಕೆ ಸಿ.ಎಂ, ದ್ವೀತಿಯ  ಸ್ಥಾನ ಜಯಲಕ್ಷ್ಮೀ ಪುರಂನ ಎಸ್.ಬಿ.ಆರ್.ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ(ಸ್ವಾಯತ್ತ) ನಿಹಾರಿಕಾ ಹೆಗಡೆ ಸಿ.ಕೆ ಹಾಗೂ ತೃತೀಯ ಸ್ಥಾನ ನಂಜನಗೂಡು ಜೆ .ಎಸ್. ಎಸ್ ಕಾಲೇಜಿನ ಕೀರ್ತನ ಎಂ. ಎಸ್  ಅವರು ಪಡೆದಿರುತ್ತಾರೆ.

ಜಿಲ್ಲಾ  ಮಟ್ಟದಲ್ಲಿ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ಪ್ರಬಂಧಗಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಿಕೊಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.