ಮನೆ ರಾಜಕೀಯ ಹೆಚ್’ಡಿಕೆ ಆಪ್ತರಿಗೆ ಡಿಕೆಶಿ ಗಾಳ: ಇಬ್ಬರು ನಾಯಕರು ಕಾಂಗ್ರೆಸ್ ಸೇರ್ಪಡೆ

ಹೆಚ್’ಡಿಕೆ ಆಪ್ತರಿಗೆ ಡಿಕೆಶಿ ಗಾಳ: ಇಬ್ಬರು ನಾಯಕರು ಕಾಂಗ್ರೆಸ್ ಸೇರ್ಪಡೆ

0

ರಾಮನಗರ: ಇದೇ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ನಾಯಕರು ಅಬ್ಬರ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಪಕ್ಷಾಂತರಗಳು ಸಹ ಜೋರಾಗಿವೆ.

Join Our Whatsapp Group

ಕಳೆದ ವಾರ ಡಿಕೆ ಶಿವಕುಮಾರ್​ ಆಪ್ತರಿಗೆ ಮಾಜಿ ಸಿಎಂ ಹೆಚ್ ​ಡಿ ಕುಮಾರಸ್ವಾಮಿ ಗಾಳ ಹಾಕಿದ್ದರು. ಪ್ರಭಾಕರ್ ರೆಡ್ಡಿ ಬದಲು ಡಿಕೆ ಶಿವಕುಮಾರ್​ ಆಪ್ತೆ ಸುಷ್ಮಾ ರಾಜಗೋಪಾಲ್ ರೆಡ್ಡಿ ಅವರಿಗೆ ಕುಮಾರಸ್ವಾಮಿ ಟಿಕೆಟ್​ ನೀಡಿದ್ದರು.

ಇದೀಗ ಡಿಕೆ ಬ್ರದರ್ಸ್ , ಕುಮಾರಸ್ವಾಮಿ ಆಪ್ತರನ್ನು ಕಾಂಗ್ರೆಸ್​​ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನಾರಾಯಣಗೌಡ ಹಾಗೂ ಪ್ರಭಾಕರ್ ರೆಡ್ಡಿ ಅವರು ಜೆಡಿಎಸ್​ ತೊರೆದು ಇಂದು(ಏಪ್ರಿಲ್ 27) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಾರಾಯಣಗೌಡ ಅವರು ಕಳೆದ ಬಾರಿ ಅಂದರೆ 2018ರಲ್ಲಿ ಕನಕಪುರ ಜೆಡಿಎಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್​ ವಿರುದ್ಧ ಸ್ಪರ್ಧಿಸಿದ್ದರು. ಇದೀಗ ಅವರನ್ನು ಡಿಕೆ ಶಿವಕುಮಾರ್​ ಕಾಂಗ್ರೆಸ್​ಗೆ​ ಸೇರಿಕೊಂಡಿದ್ದಾರೆ.

ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಇಂದು ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

ಈ ಬಾರಿ ಡಿಕೆ ಶಿವಕುಮಾರ್​ ಅವರಿಗೆ ಪ್ರಬಲ ಪೈಪೋಟಿ ಕೊಡಲೇಬೇಕೆಂದು ಸಚಿವ ಆರ್ ಅಶೋಕ್​ ಅವರನ್ನು ಕನಕಪುರದಲ್ಲಿ ಕಣಕ್ಕಿಳಿಸಿದೆ. ಇದರ ಮಧ್ಯೆ ಈ ಹಿಂದೆ ತಮ್ಮ ವಿರುದ್ಧ ಸ್ಪರ್ಧಿಸಿ 47,643 ಮತಗಳನ್ನು ಪಡೆದುಕೊಂಡಿದ್ದ ನಾರಾಯಣಗೌಡ ಅವರು ಕಾಂಗ್ರೆಸ್​ ಸೇರಿದ್ದರಿಂದ ಡಿ.ಕೆ ಶಿವಕುಮಾರ್ ಅವರಿಗೆ ಆನೆ ಬಲಬಂದಂತಾಗಿದೆ.

ಕನಕಪುರ ಕ್ಷೇತ್ರದ ಜಾತಿವಾರು ಲೆಕ್ಕಚಾರ ಹೀಗಿದೆ

ಒಕ್ಕಲಿಗ- ಒಂದು ಲಕ್ಷದ ಹತ್ತು ಸಾವಿರ, ಎಸ್ ಸಿ-ಎಸ್ ಟಿ- 45 ಸಾವಿರ, ಮುಸ್ಲಿಂಮರು 15 ಸಾವಿರ, ಲಿಂಗಾಯತ- 10 ಸಾವಿರ, ಕುರುಬ- 6 ಸಾವಿರ, ಕ್ರಿಶ್ಚಿಯನ್- 4 ಸಾವಿರ, ಲಂಬಾಣಿ- 5 ಸಾವಿರ, ಕುಂಬಾರ 4 ಸಾವಿರ, ಬಣಜಿಗ- 3 ಸಾವಿರ, ಇತರೆ- 20 ಸಾವಿರ ಮತದಾರರು ಇದ್ದಾರೆ.

ಹಿಂದಿನ ಲೇಖನಪ್ರಧಾನಿ ನರೇಂದ್ರ ಮೋದಿ ಬಗ್ಗೆ ರಾಮದಾಸ್ ಮೆಚ್ಚುಗೆ
ಮುಂದಿನ ಲೇಖನಬೇಸಿಗೆಯಲ್ಲಿ ತುರಿಸುವ ಬೆವರು ಸಾಲೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ವೈದ್ಯರ ಟಿಪ್ಸ್