ಮನೆ ರಾಜ್ಯ ಡಿಕೆಶಿ ಹುಟ್ಟುಹಬ್ಬ : ಮೈಸೂರು ಮೃಗಾಲಯದ ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಡಿಕೆಶಿ ಹುಟ್ಟುಹಬ್ಬ : ಮೈಸೂರು ಮೃಗಾಲಯದ ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

0

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ 63ನೇ ಹುಟ್ಟುಹಬ್ಬದ ಅಂಗವಾಗಿ, ರಾಜ್ಯ ಯುವ ಕಾಂಗ್ರೆಸ್ ವಿಶೇಷವಾದ ಸಾಮಾಜಿಕ ಹಂಚಿಕೆಯ ಮೂಲಕ ಶುಭಾಶಯ ಸಲ್ಲಿಸಿದೆ. ಮೈಸೂರು ಮೃಗಾಲಯದಲ್ಲಿ ಇರುವ ಆಫ್ರಿಕನ್ ಸಿಂಹವನ್ನು ಅವರು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ.

ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದ್ದು, ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಪಡೆಯಲು ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಾಲಯಕ್ಕೆ 2 ಲಕ್ಷ ರೂ. ನೀಡಲಾಗಿದೆ.

ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಚೆಸ್ ಕಪ್, ರಕ್ತದಾನ ಶಿಬಿರ, ವಿವಿಧ ದೇವಸ್ಥಾನಗಳಲ್ಲಿ ಡಿಕೆಶಿ ಹೆಸರಿನಲ್ಲಿ ಪೂಜೆ- ಅರ್ಚನೆ, ಅಂಧ ಮಕ್ಕಳಿಗೆ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಡಿ.ಕೆ. ಶಿವಕುಮಾರ್ ಅವರು ತಮ್ಮ ಜನ್ಮದಿನವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದೇ, ಕಬಿನಿಯಲ್ಲಿ ಕಳೆಯುವ ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಿದ್ದಾರೆ.