ಚಾಮರಾಜನಗರ: ನಿಗಮ ಮಂಡಳಿ ನೇಮಕ ಮಾಡುವಾಗ ಎಲ್ಲರನ್ನು ಕೇಳಿ ಮಾಡಲು ಆಗುತ್ತಾ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ನಿಗಮ ಮಂಡಳಿ ನೇಮಕ ವಿಚಾರವಾಗಿ ನನ್ನನ್ನು ಯಾರು ವಿಚಾರಿಸಿಲ್ಲ, ಯಾರು ಏನು ಕೂಡ ಕೇಳಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ವೆಂಕಟೇಶ್, ನಾವು ಕೋಳಿ ಕೊಯ್ಯುವಾಗ ಕೇಳಲು ಆಗುತ್ತಾ ಎಂದು ನಗು ನಗುತ್ತಲೇ ಟಾಂಗ್ ಕೊಟ್ಟರು.
ಅಯೋದ್ಯೆಯಲ್ಲಿ ರಾಮಲಲ್ಲ ಪ್ರತಿಷ್ಠಾಪನೆಯು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಲಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೆಂಕಟೇಶ್, ನಾವು ರಾಜಕಾರಣಿಗಳು. ಪ್ರತಿ ಸಾವಿಗು ಹೋಗುತ್ತೇವೆ ಮದುವೆಗೂ ಹೋಗುತ್ತೇವೆ. ಅಷ್ಟೇ ಯಾಕೆ ಗುಡ್ಲು ಕೂರಿಸಿದಕ್ಕೂ ಹೋಗುತ್ತೇವೆ, ನಾಮಕರಣಕ್ಕೂ ಹೋಗುತ್ತೇವೆ. ಇವೆಲ್ಲಾ ವರ್ಕೌಟ್ ಆಗುತ್ತಾ? ಇದೆಲ್ಲ ವರ್ಕೌಟ್ ಆಗಲ್ಲ ಎಂದರು.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿರುವ ವಿಚಾರವಾಗಿ ಮಾತನಾಡಿದ ಕೆ ವೆಂಕಟೇಶ್, ಅವರು ಲೋಕೋಪಯೋಗಿ ಒಲಾಖೆ ಸಚಿವರು. ಹಾಗಾಗಿ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಕೇಳಿದರು.
ನಿಗಮ ಮಂಡಳಿ ನೇಮಕಾತಿ ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಹಗ್ಗಜಗ್ಗಾಟ ನಡೆದಿದೆ. ಹೈಕಮಾಂಡ್ ಗೆ ಕಳುಹಿಸದ ಹೆಸರುಗಳು ನಿಗಮ ಮಂಡಳಿ ನೇಮಕಾತಿ ಪಟ್ಟಿಯಲ್ಲಿ ಎಂಟ್ರಿಯಾಗಿದ್ದು, ಇದು ಸಿಎಂ, ಡಿಸಿಎಂಗೆ ಶಾಕ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಅಂಬಿಗರ ಚೌಡಯ್ಯ ಕಾರ್ಯಕ್ರಮಕ್ಕೆ ಹೋಗದೇ ತಾಜ್ ವೆಸ್ಟ್ ಎಂಡ್ ನಲ್ಲಿ ಸೇರಿ ಚರ್ಚಿಸಿದ್ದರು.
ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ.
ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ. ಈ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ.
ನಿಗಮ ಮಂಡಳಿ ಕುರಿತು ಮತ್ತೆ ಚರ್ಚಿಸಲು ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರಲಿದ್ದು, ಜನವರಿ 26ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಅದೇ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಖರ್ಗೆ ಉಪಸ್ಥಿತಿಯಲ್ಲೇ ಮತ್ತೊಂದು ಸುತ್ತಿನ ಚರ್ಚೆ ನಡೆಯುವ ಸಾಧ್ಯತೆ ಇದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.