ರಕ್ತದಲ್ಲಿ ಹಿಮೋಗ್ಲೋಬಿನ್ ಮತ್ತು ಕೆಂಪು ರಕ್ತ ಕಣಗಳ ಸಂಖ್ಯೆ ಕಡಿಮೆಯಾದಾಗ ಉಂಟಾಗುವ ಖಾಯಿಲೆಯನ್ನು ರಕ್ತಹೀನತೆ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ದೇಹದಲ್ಲಿ ಕಬ್ಬಿಣದ ಕೊರತೆಯಿಂದಾಗಿ ಉಸಿರಾಟದ ತೊಂದರೆಗಳು, ಜೊತೆಗೆ ಆಯಾಸ ಮತ್ತು ತಲೆತಿರುಗುವಿಕೆಯಂತಹ ಸಮಸ್ಯೆಗಳು ಕಾಡಲಾರಂಭಿಸುತ್ತವೆ.
ಈ ಸಂದರ್ಭದಲ್ಲಿ ಯಾವ ಆಹಾರ ಸೇವಿಸಿದರೆ ಸಮಸ್ಯೆಯನ್ನು ನಿವಾರಿಸಬಹುದು ಎಂಬ ಮಾಹಿತಿ ಈ ಲೇಖನದಲ್ಲಿದೆ.
ಬೀಟ್ರೂಟ್ :
ರಕ್ತಹೀನತೆಯನ್ನು ನಿವಾರಿಸಲು ಬೀಟ್ರೂಟ್ ಸಹಾಯಕ. ಇದು ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಉತ್ತೇಜಿಸುವಲ್ಲಿ ಪ್ರಯೋಜನಕಾರಿಯಾಗಿದೆ.
ಏಕೆಂದರೆ ಇದರಲ್ಲಿ ಕಬ್ಬಿಣ, ತಾಮ್ರ, ರಂಜಕ, ಮೆಗ್ನೀಸಿಯಮ್ ಮತ್ತು ವಿಟಮಿನ್ ಬಿ 1, ಬಿ 2, ಬಿ 6, ಬಿ 12 ಮತ್ತು ಸಿ ಸಮೃದ್ಧವಾಗಿದೆ.
ನುಗ್ಗೆ ಎಲೆಗಳು :
ನುಗ್ಗೆ ಎಲೆಗಳಲ್ಲಿ ವಿಟಮಿನ್ ಎ, ಸಿ, ಮೆಗ್ನೀಸಿಯಮ್ ಮತ್ತು ಕಬ್ಬಿಣ ಸಮೃದ್ಧವಾಗಿದೆ. ಇದು ರಕ್ತಹೀನತೆಯನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ.
ಎಲೆಗಳು ದೇಹಕ್ಕೆ ತಕ್ಷಣದ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ. ಪರಿಣಾಮವಾಗಿ, ನೀವು ಆಯಾಸದಿಂದ ದೂರವಿರಬಹುದು.
ಡ್ರೈ ಪ್ರೂಟ್ಸ್ :
ಗೋಡಂಬಿ, ಬಾದಾಮಿಯಂತಹ ಪ್ರೂಟ್ಸ್ ಕಬ್ಬಿಣದ ಉತ್ತಮ ಮೂಲಗಳಾಗಿವೆ. ಅವುಗಳಲ್ಲಿರುವ ಕಬ್ಬಿಣ ಸೇರಿದಂತೆ ಅನೇಕ ಪೋಷಕಾಂಶಗಳು ರಕ್ತಹೀನತೆಯನ್ನು ತಡೆಯುತ್ತವೆ.
ಇದಲ್ಲದೆ, ಕ್ಯಾನ್ಸರ್, ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತವೆ. ಅಲ್ಲದೇ ಹೆಚ್ಚಿನ ತೂಕವನ್ನು ತಡೆಯುತ್ತವೆ.
ಎಳ್ಳಿನ ಬೀಜಗಳು :
ರಕ್ತಹೀನತೆಯನ್ನು ನಿವಾರಿಸಲು ಎಳ್ಳಿನ ಬೀಜಗಳು ಸಹ ಸಹಾಯ ಮಾಡುತ್ತವೆ.
ಕಬ್ಬಿಣ, ತಾಮ್ರ, ಸತು, ಸೆಲೆನಿಯಂ, ವಿಟಮಿನ್ ಬಿ 6, ಇ ಮತ್ತು ಫೋಲೇಟ್ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.