ಇಂದು ತಂತ್ರಜ್ಞಾನ ಮಾರುಕಟ್ಟೆ ಸಾಕಷ್ಟು ಬೆಳವಣಿಗೆ ಕಂಡಿದ್ದು ಇಂದು ಮನೆಯಲ್ಲಿಯೇ ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಅನೇಕ ಅಪ್ಲಿಕೇಷನ್ ಗಳಿವೆ. ಫೋನ್ ಪೇ , ಗೂಗಲ್ ಪೇ, ಪೇಟಿಎಂ ಅಥವಾ ಆ ಟೆಲಿಕಾಂ ಸಂಸ್ಥೆಯದ್ದೇ ಆ್ಯಪ್ ಗಳು ಇದೆ. ಆದರೆ ಅನೇಕ ಬಾರಿ ನಾವು ತರಾತುರಿಯಲ್ಲಿ ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡುತ್ತೇವೆ. ಅದು ಸಣ್ಣ ಮೊತ್ತದ ರೀಚಾರ್ಜ್ ಆಗಿದ್ದರೆ ನಿರ್ಲಕ್ಷಿಸುತ್ತಾರೆ, ಅದೇ ದೊಡ್ಡ ಮೊತ್ತ ರಾಂಗ್ ನಂಬರ್ ಗೆ ರೀಚಾರ್ಜ್ ಆಗಿದ್ದರೆ ಟೆನ್ಶನ್ ಆಗುತ್ತದೆ. ಆದರೆ, ರಾಂಗ್ ನಂಬರ್ ಗೆ ರೀಚಾರ್ಜ್ ಮಾಡಿದರೆ ಈ ಹಣ ಹಿಂಪಡೆಯಬಹುದು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.
ನೀವು ತಪ್ಪು ಸಂಖ್ಯೆ ನಮೂದಿಸಿದರೆ ಏನು ಮಾಡಬೇಕು?:
ನೀವು ತಪ್ಪಾಗಿ ಅಥವಾ ತರಾತುರಿಯಲ್ಲಿ ರಾಂಗ್ ನಂಬರ್ ಗೆ ರೀಚಾರ್ಜ್ ಮಾಡಿದ್ದರೆ, ನೀವು ಸಿಮ್ ಕಾರ್ಡ್ ಬಳಸುತ್ತಿರುವ ಟೆಲಿಕಾಂ ಆಪರೇಟರ್ ನ ಕಸ್ಟಮರ್ ಕೇರ್ ಗೆ ತಕ್ಷಣ ಕರೆ ಮಾಡಿ ಮತ್ತು ಅವರಿಗೆ ಎಲ್ಲಾ ಮಾಹಿತಿಯನ್ನು ನೀಡಿ. ಅಂದರೆ ನೀವು ಎಷ್ಟು ಮೊತ್ತ ರೀಚಾರ್ಜ್ ಮಾಡಿದ್ದೀರಿ, ಯಾವ ಕಂಪನಿಯ ನಂಬರ್ ರೀಚಾರ್ಜ್ ಮಾಡಲಾಗಿದೆ ಹಾಗೂ ಯಾವ ಆ್ಯಪ್ ಅನ್ನು ರೀಚಾರ್ಜ್ ಮಾಡಲು ಬಳಸಿದ್ದೀರಿ, ಹೀಗೆ ಎಲ್ಲ ಮಾಹಿತಿಯನ್ನು ಟೆಲಿಕಾಂ ಆಪರೇಟರ್ ಗೆ ನೀಡಬೇಕು.
ಇದಲ್ಲದೆ, ನೀವು ತಪ್ಪಾಗಿ ರೀಚಾರ್ಜ್ ಮಾಡಿದ ಬಗ್ಗೆ ಸಂಪೂರ್ಣ ವಿವರಗಳನ್ನು ಇಮೇಲ್ ಮೂಲಕ ಸಂಬಂಧಪಟ್ಟ ಕಂಪನಿಗೆ ಕಳುಹಿಸಬಹುದು. ಈ ಮೂಲಕ ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಭಾರತದಲ್ಲಿ ಹೆಚ್ಚಿನ ಜನರು ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಸಿಮ್ ಕಾರ್ಡ್ ಗಳನ್ನು ಬಳಸುತ್ತಾರೆ. ನೀವು ಈ ಟೆಲಿಕಾಂ ಕಂಪನಿಯ ಇಮೇಲ್ ಐಡಿಯನ್ನು ಸುಲಭವಾಗಿ ಪಡೆಯಬಹುದು. ಹೀಗೆ ಅವರಿಗೆ ಮೇಲ್ ಮೂಲಕ ಸ್ಪಷ್ಟ ಮಾಹಿತಿಯನ್ನು ನೀಡಿ.
ಟೆಲಿಕಾಂ ಕಂಪನಿ ಪ್ರತಿಕ್ರಿಯಿಸದಿದ್ದಲ್ಲಿ ಏನು ಮಾಡಬೇಕು ?:
ಅನೇಕ ಬಾರಿ ಟೆಲಿಕಾಂ ಕಂಪನಿಗಳು ಗ್ರಾಹಕರ ದೂರುಗಳನ್ನು ಸ್ವೀಕರಿಸುವುದಿಲ್ಲ. ದೀರ್ಘಕಾಲದವರೆಗೆ ಕರೆಯಲ್ಲಿ ಕಾದರೂ ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಕೆಲವು ಬಾರಿ ಕಾಲ್ ಕನೆಕ್ಟ್ ಕೂಡ ಆಗುವುದಿಲ್ಲ. ಟೆಲಿಕಾಂ ಕಂಪನಿಯು ನಿಮ್ಮ ದೂರಿನ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳದಿದ್ದರೂ ಸಹ, ನೀವು ಕಸ್ಟಮರ್ ಕೇರ್ ಪೋರ್ಟಲ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಬಹುದು. ಅಥವಾ ನಿಮ್ಮ ದೂರನ್ನು ವಾಟ್ಸ್ ಆ್ಯಪ್ ಮೂಲಕವೂ ದಾಖಲಿಸಬಹುದು. ಇದಲ್ಲದೆ, ನೀವು ಪ್ಲೇ ಸ್ಟೋರ್ ನಿಂದ ಗ್ರಾಹಕ ಸೇವಾ ಪೋರ್ಟಲ್ ಅಪ್ಲಿಕೇಶನ್ ಅನ್ನು ಡೌನ್ ಲೋಡ್ ಮಾಡುವ ಮೂಲಕವೂ ದೂರು ಸಲ್ಲಿಸಬಹುದು.
ಈ ವಿಚಾರ ನೆನಪಿನಲ್ಲಿಡಿ:
ಆದರೆ ಒಂದು ವಿಷಯ ನೆನಪಿಡಿ, ನೀವು ಸಮಯಕ್ಕೆ ಸರಿಯಾಗಿ ದೂರು ಸಲ್ಲಿಸಿದರೆ ಮಾತ್ರ ನಿಮ್ಮ ಹಣವನ್ನು ನೀವು ಹಿಂಪಡೆಯಬಹುದು. ಅಲ್ಲದೆ ನಿಮ್ಮ ಮೊಬೈಲ್ ಸಂಖ್ಯೆಯು ರೀಚಾರ್ಜ್ ಮಾಡಿದ ಸಂಖ್ಯೆಯೊಂದಿಗೆ ಹೊಂದಾಣಿಕೆಯಾಗಬೇಕು. ಅಂದರೆ, ಒಂದು ಅಥವಾ ಎರಡು ಸಂಖ್ಯೆಗಳಿಂದಾಗಿ ರೀಚಾರ್ಜ್ ತಪ್ಪು ಸಂಖ್ಯೆಗೆ ಹೋದರೆ, ಹಣವನ್ನು ಮರಳಿ ಪಡೆಯುವ ಅವಕಾಶವಿದೆ. ಅದೇ ಸಂಪೂರ್ಣ ಸಂಖ್ಯೆ ವಿಭಿನ್ನವಾಗಿದ್ದರೆ, ಅಂತಹ ಸಂದರ್ಭದಲ್ಲಿ ಕಂಪನಿಯು ಪಾವತಿಸಲು ಹಿಂಜರಿಯುತ್ತದೆ. ಏಕೆಂದರೆ ಅನೇಕ ಜನರು ಉದ್ದೇಶಪೂರ್ವಕವಾಗಿ ಈರೀತಿ ಮಾಡುವವರೂ ಇರುತ್ತಾರೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.