ಮೈಸೂರು(Mysuru): ಚುನಾವಣಾ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ‘ಉಚಿತ’ ಆಫರ್ ನೀಡುವುದು ಮಾಮೂಲಿ ಎಂಬಂತಾಗಿದ್ದು, ಈ ಪುಕ್ಕಟೆ ಭರವಸೆಗಳಿಗೆ ಜನರು ಮರುಳಾಗಬಾರದು ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
ಇದೊಂತರ ಕೇಜ್ರಿವಾಲ್ ಮಾಡೆಲ್ ಆಗಿದೆ. ಪುಕ್ಕಟೆ ನೀರು, ಕರೆಂಟ್, ಕುಕ್ಕರ್, ಟಿವಿ, ಭೂಮಿ ಕೊಡುತ್ತೇನೆ ಎಂದು ಡಿಎಂಕೆ ಹಾಗೂ ಕೇಜ್ರಿವಾಲ್ ಬೇರೆ ಲೆವೆಲ್ ಗೆ ತೆಗೆದುಕೊಂಡು ಹೋಗಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಪ್ರತಿ ಮಹಿಳೆಗೂ ಒಂದು-ಎರಡು ಸಾವಿರ ಕೊಡುವುದಾಗಿ ಆಮ್ ಆದ್ಮಿ ಹೇಳಿತ್ತು. ಸರ್ಕಾರ ಬಂದು ಒಂದು ವರ್ಷದ ಮೇಲಾದರೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.
ರಾಜಕಾರಣಿಗಳು ಅವರ ಅಪ್ಪನ ಆಸ್ತಿ ಮಾರಿ ತಂದು ಕೊಡುತ್ತಾರಾ? ಜನರು ಕೊಡೊ ಅಧಿಕಾರ ದುರುಪಯೋಗ ಮಾಡಿಕೊಂಡು ಮಕ್ಕಳು, ಮರಿ ಮಕ್ಕಳಿಗೆ ಆಸ್ತಿ ಮಾಡುತ್ತಾರೆ. ಇವರು ಜನರಿಗೆ ಏನೂ ಕೊಡುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಏನಾದರೂ ಉಚಿತವಾಗಿ ಕೊಡುತ್ತೀನೆಂದರೆ ಸಿದ್ದರಾಮನಹುಂಡಿಗೆ ಹೋಗಿ ದುಡಿದು ತಂದು ನಿಮಗೆ ಕೊಡುವುದಿಲ್ಲ. ಹಾಸನ ಮೂಲದವರು ಚಿನ್ನದ ಆಲೂಗಡ್ಡೆ ಬೆಳೆದು, ಜೋಳ ಬೆಳೆದು ತಂದು ನಿಮಗೆ ಕೊಡುವುದಿಲ್ಲ. ಬಿಜೆಪಿಯವರೇ ಆದರೂ ಅವರ ಮನೆಯಿಂದ ತಂದು ಕೊಡುವುದಿಲ್ಲ. ಅದಕ್ಕೆ ಉಚಿತವಾಗಿ ಕೊಡುತ್ತೇವೆ ಎಂದು ಯಾರೇ ಹೇಳಿದರೂ ನಂಬಬೇಡಿ ಎಂದು ಮನವಿ ಮಾಡಿದರು.
ನಿಮ್ಮ ತೆರಿಗೆ ಹಣವನ್ನು ನಿಮಗೇ ಹಂಚುತ್ತೇವೆ ಎಂದು ರಾಜ್ಯ ದಿವಾಳಿ ಮಾಡುತ್ತಾರೆ. ದಯವಿಟ್ಟು ಇಂತಹದಕ್ಕೆ ಯಾರೂ ಸೊಪ್ಪು ಹಾಕಬೇಡಿ. ಇದು ನೂರಕ್ಕೆ ನೂರು ಗಿಮಿಕ್ ರಾಜಕಾರಣ. ಜಗತ್ತಿನಲ್ಲಿ ಯಾವ ರಾಜಕಾರಣಿ ತನ್ನ ಮನೆಯಿಂದು ತಂದು ಕೊಟ್ಟು ಉದಾಹರಣೆ ತೋರಿಸಿ. ತನ್ನ ವೈಯಕ್ತಿಕ ಬದುಕು ಹೆಚ್ಚಿಸಿಕೊಂಡಿದ್ದಾನೆಯೇ ಹೊರತು ಸಮಾಜಕ್ಕಾಗಿ ದುಡಿದಿರುವ ಉದಾಹರಣೆಯೇ ಇಲ್ಲ ಎಂದು ಹೇಳಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.