ಮನೆ ರಾಜಕೀಯ ಮೂಲಭೂತ ಸೌಕರ್ಯ ಒದಗಿಸುವರೆಗೆ ಯಾರು ಗ್ರಾಮಕ್ಕೆ ಬರಬೇಡಿ: ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಮುಖಂಡರಿಗೆ ಮಹಿಳೆಯರ ಘೇರಾವ್

ಮೂಲಭೂತ ಸೌಕರ್ಯ ಒದಗಿಸುವರೆಗೆ ಯಾರು ಗ್ರಾಮಕ್ಕೆ ಬರಬೇಡಿ: ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಮುಖಂಡರಿಗೆ ಮಹಿಳೆಯರ ಘೇರಾವ್

0

ಹಾರೋಹಳ್ಳಿ: ತಾಲ್ಲೂಕಿನ ಬಾದಗೆರೆಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತು ಜೆಡಿಎಸ್‌ ಸ್ಥಳೀಯ ಮುಖಂಡರಿಗೆ ಗ್ರಾಮದ ಮಹಿಳೆಯರು ಘೇರಾವ್‌ ಹಾಕಿ ಗ್ರಾಮದಿಂದ ಹೊರ ಹೋಗುವಂತೆ ತಾಕೀತು ಮಾಡಿರುವ ಘಟನೆ ನಡೆದಿದೆ.

Join Our Whatsapp Group

ಐದಾರು ದಿನಗಳ ಹಿಂದೆ ನಡೆದಿರುವ ಈ ಘಟನೆಯನ್ನು ಮೊಬೈಲ್‌ ನಲ್ಲಿ ಸೆರೆ ಹಿಡಿದಿದ್ದ ಗ್ರಾಮದ ಯುವಕರು ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ನಮ್ಮ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸುವವರೆಗೂ ಯಾರು ಗ್ರಾಮಕ್ಕೆ ಬರಬೇಡಿ. ಈ ಬಾರಿ ಚುನಾವಣೆಯಲ್ಲಿ ನಾವು ಯಾರೂ ಮತ ಹಾಕುವುದಿಲ್ಲ. ಐದು ವರ್ಷದಲ್ಲಿ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸ ಆಗಿಲ್ಲ. ಕುಡಿಯುವ ನೀರಿಲ್ಲ. ಚರಂಡಿ, ರಸ್ತೆ ಅಭಿವೃದ್ಧಿ ಆಗಿಲ್ಲ. ನಮ್ಮ ಸಮಸ್ಯೆಗಳನ್ನು ಕೇಳುವವರು ಯಾರೂ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಜೆಡಿಎಸ್‌ ಮುಖಂಡರು ಸಮಾಧಾನ ಪಡಿಸಲು ಪ್ರಯತ್ನಿಸಿದಾಗ ಮತ್ತಷ್ಟು ಸಿಟ್ಟಿಗೆದ್ದ ಮಹಿಳೆಯರು, ನಮ್ಮನ್ನು ಯಾರೂ ಸಮಾಧಾನ ಪಡಿಸುವ ಅಗತ್ಯ ಇಲ್ಲ. ಯಾವ ಪಕ್ಷದವರು ಗ್ರಾಮಕ್ಕೆ ಬರಬೇಡಿ. ಮೊದಲು ಅಭಿವೃದ್ಧಿ ಕೆಲಸ ಮಾಡಿ. ನಂತರ ಮತ ಕೇಳಲು ಗ್ರಾಮಕ್ಕೆ ಬನ್ನಿ ಎಂದು ಮುಲಾಜಿಲ್ಲದೆ ಹೇಳಿದರು.

ಇದರಿಂದ ವಿಚಲಿತರಾದ ನಿಖಿಲ್‌ ಹಾಗೂ ಕಾರ್ಯಕರ್ತರು ಮರು ಮಾತನಾಡದೆ ಮೌನಕ್ಕೆ ಶರಣಾದರು.

ಮೌನ ಮುರಿದ ನಿಖಿಲ್‌ ಕುಮಾರಸ್ವಾಮಿ, ಮುಂದೆ ಈ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ನಿಮ್ಮಗ್ರಾಮದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಚುನಾವಣೆ ಮುಗಿದ ನಂತರ ಮಾಡಿ ಕೊಡುತ್ತೇವೆ ಎಂದು ಮಹಿಳೆಯರನ್ನು ಸಮಾಧಾನಪಡಿಸಿದರು.

ಹಿಂದಿನ ಲೇಖನದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷ ರೂ. ವಶ
ಮುಂದಿನ ಲೇಖನರಾಜ್ಯದ ಐಎಎಸ್ ಅಧಿಕಾರಿ ಆಕಾಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ದೂರು ದಾಖಲು