ಬೆಂಗಳೂರು(Bengaluru): ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ನಕಲಿ ಸರ್ಟಿಫಿಕೇಟ್ ರಾಜʼ @ ನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣ ಕುರುಡಾದರೂ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.
ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, ಚಾಪ್ಟರ್ 2, ಚಾಪ್ಟರ್ 3 ಆಗುತ್ತವೆ; ಬಿಚ್ಚಲೇ ಎಂದು ಪ್ರಶ್ನಿಸಿದ್ದಾರೆ.
ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ!! ಎಂದು ಹೇಳಿದ್ದಾರೆ.
ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ? ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು? ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದು ನೋಡಿ ಅಶ್ವತ್ಥನಾರಾಯಣ ಎಂದಿದ್ದಾರೆ.
ನನ್ನ ಸರಕಾರವನ್ನು ತೆಗೆಯಲು ಸಮಾಜಘಾತುಕ ಶಕ್ತಿಗಳ ಜತೆ ಕೈ ಮಿಲಾಯಿಸಿದ್ದು, ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಜತೆ ಶಾಮೀಲಾಗಿದ್ದು, ಹಣದ ಹೊಳೆ ಹರಿಸಿದ್ದು ಎಲ್ಲವೂ ಗೊತ್ತಿದೆ. ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ, ಬಿಚ್ಚಿಡಬೇಕು ಎಂದರೆ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಪಠ್ಯ ಪರಿಷ್ಕರಣೆ ಮಾಡಿದಿರಲ್ಲ. ದಾದಿಯರ ನಕಲಿ ಸರ್ಟಿಫಿಕೇಟ್ ಸೃಷ್ಟಿ ಹೇಗೆ? ಆಪರೇಷನ್ ಕಮಲ ಮಾಡುವುದು ಹೇಗೆ? ಕದ್ದುಮುಚ್ಚಿ ಹಣ ಸಾಗಿಸಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದು ಹೇಗೆ? ಇದೆಲ್ಲವನ್ನು ಪಠ್ಯದಲ್ಲಿ ಸೇರಿಸಿದ್ದಿದ್ದರೆ ಮುಂದಿನ ಯುವಜನರಿಗೂ ನಿಮ್ಮಂತೆಯೇ ಆಗುವ ಭಾಗ್ಯ ಸಿಗುತ್ತಿತ್ತು? ಅಲ್ಲವೇ ಆಪರೇಷನ್ ಅಶ್ವತ್ಥನಾರಾಯಣ? ಎಂದು ಪ್ರಶ್ನಿಸಿದ್ದಾರೆ.
ಕಾಲು ಸುಂಕದ ರಸ್ತೆ ಕುಸಿದು ಏಳು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಕನಿಷ್ಠ ಪಾಪಪ್ರಜ್ಞೆಯೂ ಇಲ್ಲವೇ ನಿಮಗೆ? ಆಕಾಶದಲ್ಲಿ ಹಾರಾಡುವ ನಿಮಗೆ ಕಾಲು ಸುಂಕದ ಕಷ್ಟ ಅರ್ಥವಾದೀತೆ ಅಶ್ವತ್ಥನಾರಾಯಣ? ಮಳೆ ನೆರೆಯಿಂದ ಕರ್ನಾಟಕ ಕಣ್ಣೀರ ಕಡಲಾಗಿರುವುದು ಕಾಣುತ್ತಿಲ್ಲವೇ?
ನಾನು ಎರಡನೇ ಸಲ ಸಿಎಂ ಆದಾಗ 800 ಕಾಲು ಸುಂಕ ಸೇತುವೆಗಳ ನಿರ್ಮಾಣಕ್ಕೆ ಆದೇಶಿಸಿದ್ದೆ. ಅವುಗಳಲ್ಲಿ ಎಷ್ಟು ಪೂರ್ಣಗೊಳಿಸಿದ್ದೀರಿ? 3 ವರ್ಷಗಳ ನಿಮ್ಮ ಸರಕಾರದಲ್ಲಿ ಇಂಥಾ ಎಷ್ಟು ಸೇತುವೆ ನಿರ್ಮಿಸಿದ್ದೀರಿ? ಒಂದು ಮುಗ್ಧ ಸಾವು ನಿಮ್ಮ ಮನ ಕಲಕಲಿಲ್ಲವಲ್ಲಾ.. ನಾಚಿಕೆ ಆಗುವುದಿಲ್ಲವೇ ಉನ್ನತ ಶಿಕ್ಷಣ ಸಚಿವರೇ?
ಆಪರೇಷನ್ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ?
ಜೆಡಿಎಸ್ ಕಂಪನಿ ಎನ್ನುತ್ತೀರಿ! ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ? ಹೊರಗೆ ಸಾಚಾತನ, ಒಳಗೆ ಸೋಗಲಾಡಿತನ. ಎರಡು ತಲೆಯ ಕುಶಲತೆಯನ್ನು ಎಲ್ಲಿಂದ ಕಲಿತಿರಿ? ಸಂಘದಿಂದ ಬಂದ ಸಂಸ್ಕಾರವೇ? ಅಥವಾ ತಮ್ಮ ಹಿನ್ನೆಲೆಯೇ ಇದಾ? ನಿಮ್ಮ ನೈಜ ಹಿನ್ನೆಲೆಯ ಪುರಾಣ ಗೊತ್ತಿದ್ದವರಿಗೆ ಇದೇನು ಅಚ್ಚರಿಯಲ್ಲ ಬಿಡಿ ಅಶ್ವತ್ಥನಾರಾಯಣ.
ಕುಮಾರಸ್ವಾಮಿ. ಜೆಡಿಎಸ್ ಕಂಪನಿ ಇರಲಿ, ನಿಮ್ಮ ಕಂಪನಿಗಳ ಬಗ್ಗೆಯೇ ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತು ಎಂಬುದನ್ನು ಮರೆಯಬೇಡಿ . ಚುನಾವಣೆ ಬರಲಿ, ಕಂಪನಿಗಳ ಕಲರವ ಮತ್ತು ʼಠಮ ಠಮ ಠಮʼ ಸದ್ದು ಏನೆಂಬುದನ್ನು ರಾಮನಗರದಲ್ಲಿ ಕೇಳುವಂತೆ ಮಾಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.